• July 27, 2024

ಸುಬ್ರಹ್ಮಣ್ಯ:ವ್ಯಕ್ತಿಯೋರ್ವರ ಮನೆಗೆ ಅತಿಥಿಯಾಗಿ ಬಂದಿದ್ದಾತ ಮನೆ ಯಜಮಾನನಿಗೆ ಚೂರಿಯಿಂದ ಇರಿತ

 ಸುಬ್ರಹ್ಮಣ್ಯ:ವ್ಯಕ್ತಿಯೋರ್ವರ ಮನೆಗೆ ಅತಿಥಿಯಾಗಿ ಬಂದಿದ್ದಾತ ಮನೆ ಯಜಮಾನನಿಗೆ ಚೂರಿಯಿಂದ ಇರಿತ

ಸುಬ್ರಹ್ಮಣ್ಯ: ವ್ಯಕ್ತಿಯೋರ್ವರ ಮನೆಗೆ ಅತಿಥಿಯಾಗಿ ಬಂದಿದ್ದಾತ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ವಾದ ವಿವಾದಗಳು ನಡೆದು ಮನೆಯ ಯಜಮಾನನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ನಡೆದಿದೆ.

ಎಂಟು ವರ್ಷಗಳ ಹಿಂದೆ ತೋಟದ ಮಜಲು ಎಂಬಲ್ಲಿ ಜಾಗವಖರೀದಿಸಿ ಕೇರಳ ಮೂಲದ ಲೂಕೋಸ್ ಎಂಬವರು ಸಂಸಾರಸಮೇತರಾಗಿ ವಾಸವಾಗಿದ್ದರು. ಆದರೆ ಎರಡು ವರ್ಷದ ಹಿಂದೆ ಪತ್ನಿ ಬಿಟ್ಟು ಹೋಗಿದ್ದು, ಒಬ್ಬಂಟಿಯಾಗಿ ಜೀವಿಸುತ್ತಿದ್ದರು. ವಾರದ ಹಿಂದೆ ಲೂಕೋಸ್ ಅವರ ಮನೆಗೆ ಅತಿಥಿಯೊಬ್ಬ ಬಂದಿದ್ದು ಇವರ ಮನೆಯಲ್ಲೇ ವಾಸವಾಗಿದ್ದ. ಜೂ.2 ರಂದು ಗುತ್ತಿಗೆದಾರರಾಗಿ ತೆರಳಿದ್ದು, ಬಳಿಕ ಮನೆಗೆ ವಾಪಸ್ ಆಗಿದ್ದರು.ಅತಿಥಿಯಾಗಿ ಮನೆಗೆ ಬಂದಿದ್ದಾತ ರಬ್ಬರ್ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಲೂಕೋಸ್ ಅವರಿಗೆ ನಾಲ್ಕೈದು ಬಾರಿ ಇರಿದಿದ್ದು, ಬಳಿಕ ಪರಾರಿಯಾಗಿದ್ದಾನೆ.
ಸುಬ್ರಹ್ಮಣ್ಯ ಪೊಲೀಸರು ಆರೋಪಿಯ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!