• October 18, 2024

ಬೆಳ್ತಂಗಡಿ: 6 ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

 ಬೆಳ್ತಂಗಡಿ: 6 ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

 

ಮಾನ್ಯ ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳೂರಿನ ಪಾವೂರು ನಿವಾಸಿಯಾದ ಚಂದ್ರಹಾಸ ಅಮೀನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 4,75,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಮುಂಡಾಜೆ ನಿವಾಸಿ ಗುಣಪಾಲ ಎಂ ಎಸ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 81,721/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಕಾಜೂರು ನಿವಾಸಿಯಾದ ಸಮೀರ್ ಎಂಬರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 1,00,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ ಹಾಗೂ ಮೂಡಬಿದ್ರೆ ನಿವಾಸಿಯಾದ ಸುನಿಲ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 45,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿದೆ.

ಮಾನ್ಯ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಮುಂಡಾಜೆ ನಿವಾಸಿಯಾದ ಪ್ರಸಾದ್ ಶೆಟ್ಟಿ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 1,00,000/- ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ನಿರ್ದೋಷಿ ಎಂದು ತೀರ್ಮಾನಿಸಿ ನ್ಯಾಯಾಲಯವು ತೀರ್ಪು ನೀಡಿದೆ.
ಮಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಮುಂಡಾಜೆಯ ನಿವಾಸಿಯಾದ ರವಿ ಎನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 5,65,000/- ಗಳ ಚೆಕ್ಕು ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ನಿರ್ದೋಷಿ ಎಂದು ತೀರ್ಮಾನಿಸಿ ನ್ಯಾಯಾಲಯವು ತೀರ್ಪು ನೀಡಿದೆ.

ಈ ಎಲ್ಲಾ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ (ಬೆಳ್ತಂಗಡಿ ಹಾಗೂ ಬೆಂಗಳೂರು) ನ ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related post

Leave a Reply

Your email address will not be published. Required fields are marked *

error: Content is protected !!