ನೇಲ್ಯಡ್ಕ (ಏ. 27): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ಏಪ್ರಿಲ್ 27 ರಂದು ನೇಲ್ಯಡ್ಕದಲ್ಲಿ ನಡೆಯಿತು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ […]Read More
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏ 22 ನೇ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ತಿಳಿಸಿದ್ದಾರೆ.ಹಿಮ್ಮೇಳದಲ್ಲಿ –ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.ಚೆಂಡೆ ಮದ್ದಳೆ ವಾದಕರಾಗಿ […]Read More
ಮೊಗ್ರು: ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏಪ್ರಿಲ್ 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ 17ರಂದು ಶಿಶುಮಂದಿರದಲ್ಲಿ ನಡೆಯಿತು. ಉದಯ ಭಟ್, ನಿರ್ದೇಶಕರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉದಯ […]Read More
ರುಡ್ಸೆಟ್ ಸಂಸ್ಥೆ ಉಜಿರೆಯ 2024-25 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಬಿಡುಗಡೆಗೊಳಿಸಿ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನ್ ಟ್ರಸ್ಟ್ ಮತ್ತು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಸಹಕಾರದೊಂದಿಗೆ ನಡೆಯುವ ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಪರಮ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಬಿಡುಗಡೆಗೊಳಿಸಿ, ಮಾತನಾಡಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ವೆಚ್ಚುಗೆ […]Read More
ಕನ್ಯಾಡಿ(ಏ.19) : ಕನ್ಯಾಡಿ ಸೇವಾನಿಕೇತನಕ್ಕೆ ಶ್ರೀ ರಾಜೇಂದ್ರ ಅಜ್ರಿ ಏಪ್ರಿಲ್ 19 ರಂದು ಭೇಟಿ ನೀಡಿ ತನ್ನ ಹುಟ್ಟುಹಬ್ಬದ ಜೊತೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ.15,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ. ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು.Read More
ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ. ಮನೆ ಮನ ಗೆದ್ದಿರುವ ಯುವ ಉದ್ಯಮಿ ಹಾಗೂ ಭಟ್ ಅಂಡ್ ಭಟ್ ಖ್ಯಾತಿಯ ಸುದರ್ಶನ್ ಭಟ್ ಅವರು ಈ ಶಾಲೆಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀ ಕೃಷ್ಣ ನಾರಾಯಣ ಮುಳಿಯ ಮಾತನಾಡುತ್ತಾ ” ಗ್ರಾಹಕ […]Read More
ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ, ದಯಾ ವಿಶೇಷ ಶಾಲೆ ಲೈಲಾ ಇಲ್ಲಿನ ಸುಮಾರು 150 ವಿಕಲಚೇತನ ಮಕ್ಕಳಿಗೆ , ಶಾಲೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು, ಸಮಾರಂಭದ ಅತಿಥಿಗಳು, ಮುಳಿಯ ಗೋಲ್ಡ್ ಆಂಡ್ ಡೈಮಿಂಡ್ಸ್ ನ ಎಕ್ಸಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಮುಳಿಯ ಗೋಲ್ಡ್ ಆಂಡ್ ಡೈಮಿಂಡ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕಾರದ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.Read More
ವಿಷುಕಣಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ನೇತೃತ್ವದಲ್ಲಿ ನಾಲ್ಕನೇ ವರ್ಷದ ವಿಷು ಕಣಿ-2025 ಕಾರ್ಯಕ್ರಮವು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೇರಳದ ಪ್ರಸಿದ್ಧ ಚೆಂಡೆ ಬಳಗ, ಪೂಕಳಂ, ವಿವಿಧ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮಧ್ಯಾಹ್ನ ವಿವಿಧ ಬಗೆಯ ಕೇರಳ ಮಾದರಿಯ ಭೋಜನದ ವ್ಯವಸ್ಥೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ […]Read More
ಮೊಗ್ರು : ನಾಳೆ (ಎ. 13 ) ಮೊಗ್ರು ಗ್ರಾಮದ ಅಲೆಕ್ಕಿ-ಮುಗೇರಡ್ಕ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಹಾಗೂ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಸಹಯೋಗದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ ಎಪ್ರಿಲ್ 13 ರಿಂದ 17 ರವರೆಗೆ ನಡೆಯಲಿದೆ. ಪದ್ಮುಂಜ ಪ್ರಾಥಮಿಕ ಕೃಷ್ಣಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಕಾರ್ಯಕ್ರಮದ […]Read More
ಮಂಗಳೂರು (ಏ. 12): ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಶ್ರೀ ಅರ್ಜುನ್ ಭಂಡಾರ್ಕರ್ ಇವರು ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ 281 ಬ್ಯಾಗ್ ಸಿಮೆಂಟ್ ಗೆ ರೂ. 1,00,000/- ದ ಚೆಕ್ ನೀಡಿ ಸಹಕರಿಸಿದ್ದಾರೆ. ಈ ಸಂಸ್ಥೆಯು ಈಗಾಗಲೇ ದಕ್ಷಿಣ ಕನ್ನಡದಾದ್ಯಂತ ಅನೇಕ ಅಸಹಾಯಕರಿಗೆ, ಅಶಕ್ತರಿಗೆ ಮತ್ತು ದುರ್ಬಲರಿಗೆ ಬೇಕಾದ ವೈದ್ಯಕೀಯ ವೆಚ್ಚವನ್ನು ನೀಡಿ ಅವರ ನೋವಿಗೆ ಸ್ಪಂದಿಸಿ ಅವರ ಬಾಳಲ್ಲಿ ಆಶಾಕಿರಣವಾಗಿದೆ. ಸೇವಾಧಾಮ […]Read More