ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಲಯದ ಕಟ್ಟಡ ಕಾರ್ಮಿಕರ ಸಭೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯನ್ ಕಟ್ಟಡ ಕಾರ್ಮಿಕರ ಸ್ಕಾಲರ್ಶಿಪ್ ಗೃಹ ಸಹಾಯಧನ ಮುಂತಾದ ಕಾರ್ಮಿಕರ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಬಿ ಎಂ ಎಸ್ ಎನ್ ಬೆಳ್ತಂಗಡಿ ತಾಲೂಕು ಸಂಯೋಜಕ ಸಾಂತಪ್ಪ ಕಲ್ಮಂಜ ಅವರು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕ ಮದ್ದೂರ್ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ […]Read More
ಕುದ್ರಾಯ: ಧರ್ಮಸ್ಥಳದಿಂದ ಮಿಯಾರ್ ಗೆ ತೆರಳುವ ಬಸ್ ಸಂಜೆ 5:30 ಸುಮಾರಿಗೆ ಕುದ್ರಾಯ ಎಂಬಲ್ಲಿ ಕೆಟ್ಟು ನಿಂತು ಇಂದು ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಸಮಯಕ್ಕೆ ಸರಿಯಾಗಿ ಬದಲಿ ಬಸ್ ನೀಡಿದ್ದರು ಸಹ ವಿದ್ಯಾರ್ಥಿಗಳಿಗೆ ಅಡಚಣೆಯುಂಟಾಗಿದೆ. ಈ ಮೊದಲು ಹಲವಾರು ಭಾರೀ ಇದೇ ಸಮಸ್ಯೆಗಳಾಗಿದ್ದು ಬರೆಂಗಾಯ ಕಾರ್ಯಾತಡ್ಕ ಹಾಗೂ ಮಿಯಾರ್ ಗೆ ತೆರಳುವ ಪ್ರಯಾಣಿಕರಿಗೆ ಅಸಮಾಧಾನ ಉಂಟಾಗಿದೆ. ಅತೀ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಬರುವ ಈ ಬಸ್ಸಲ್ಲಿ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುತ್ತಾರೆ. ಆದ್ದರಿಂದ ಪ್ರಯಾಣಿಕರಿಗೆ ತೊಂದರೆಯಾಗದ […]Read More
ಆರಿಕೋಡಿ: ಚಂದ್ರಗ್ರಹಣದ ಪ್ರಯುಕ್ತ ನ.8ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಅಭಯದನುಡಿ ಮತ್ತು
ಆರಿಕೋಡಿ: ನ.8ರಂದು ಚಂದ್ರಗ್ರಹಣ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಅಭಯದನುಡಿ ಮತ್ತು ಪೂಜೆ ಇರುವುದಿಲ್ಲ. ನ.9 ರಂದು ಎಂದಿನಂತೆ ವಾರದಲ್ಲಿ ಮೂರು ದಿನ( ಭಾನುವಾರ, ಮಂಗಳವಾರ, ಶುಕ್ರವಾರ) ಅಭಯದ ನುಡಿ ಮತ್ತು ದೇವಿಗೆ ವಿಶೇಷ ಪೂಜೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿಗಳು ಮತ್ತು ಆಡಳಿತ ಮಂಡಳಿ ತಿಳಿಸಿದ್ದಾರೆ.Read More
ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರಿಗೆ ನೆನ್ನೆ ರಾತ್ರಿ 4 ನಂಬರ್ ಗಳಿಂದ ಬೆದರಿಕೆ ಕರೆ ಬಂದಿವೆ ಎಂದು ಬೆಂಗಳೂರಿನಲ್ಲಿ ಮುತಾಲಿಕ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಕರೆ ಬಂದಿದೆ. ಕೊಲೆ ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಗುಡುಗಿದ್ದಾರೆ. ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.Read More
ಧರ್ಮಸ್ಥಳ: ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ಎಸ್ ರೆಡ್ಡಿ ಎಂಬಾಕೆ ಕಾಂತಾರ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ ಸ್ಟಾಗ್ರಾಂ ನಲ್ಲಿ ಹರಿಬಿಟ್ಟಿದ್ದು, ಈ ಪೋಸ್ಟ್ ಗೆ ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ತನ್ನ ತಪ್ಪಿನ ಅರಿವಾಗಿದ್ದ ಯುವತಿ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ತಪ್ಪೊಪ್ಪಿಗೆ ಕಾಣಿಕೆಯನ್ನು ಹಾಕಿದ್ದಾಳೆ. ತುಳುನಾಡಿನ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಇದೀಗ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿ ತಪ್ಪೊಪ್ಪಿಗೆ ಕಾಣಿಕೆಯನ್ನು ಹಾಕಿ, […]Read More
ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಎಲ್ಲೆಡೆ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿ:ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ ವೇಳೆ ತಾಯಿ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳು ಸಲ್ಲಿಸುವ ಅವಶ್ಯಕತೆ ಎದುರಾಗುವುದಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿದ್ದು, […]Read More
ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ – ಸಹಾಯ ಸಂಘಗಳ ಒಕ್ಕೂಟ, ಕಣಿಯೂರು – ಪದ್ಮುಂಜ, ಜನಜಾಗೃತಿ ಗ್ರಾಮ ಸಮಿತಿ ಕಣಿಯೂರು ವಿಭಾಗ, ಶ್ರೀ ಮಹಾ ವಿಷ್ಣು ದೇವಸ್ಥಾನ ಕಣಿಯೂರು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ, ಗ್ರಾಮ ಸುಭೀಕ್ಷಾ ಕಾರ್ಯಕ್ರಮದಡಿಯಲ್ಲಿ ಸೀಯಾಲಾಭಿಷೇಕ ನ.3 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ, ರೈತ ಬಂಧು ಮಾಲೀಕರಾದ ಶಿವಶಂಕರ್, ಜನ ಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರಫುಲ್ಲಚಂದ್ರ ಅಡ್ಯಂತಾಯ, ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, […]Read More
ತೋಟತ್ತಾಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಹಾಗೂ ಚೈತನ್ಯ ಮಹಾಸಂಘ ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳಾ ಸಂಘಗಳ ಬಲವರ್ಧನೆಯ ನಿಟ್ಟಿನಲ್ಲಿ ಸಂಘೋತ್ಸವ- 2022 ಎಂಬ ವಿನೂತನ ಕಾರ್ಯಕ್ರಮವನ್ನು ನ.3 ರಂದು ತೋಟತ್ತಾಡಿ ಸಂತ ಅಂತೋನಿ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಯಿತು. ತೋಟತ್ತಾಡಿ ಸಂತ ಅಂತೋನಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಜೋಸ್ ಪೂವತ್ತಿಂಗಲ್ ರವರು […]Read More
ಪುತ್ತೂರು: ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ರೈಟ್ ಪೋಯಿ ಎಂದು ಹೇಳಿದ ಕಾರಣ ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್ ಚಲಾಯಿಸಿಕೊಂಡು ಹೋದ ಘಟನೆ ಪುತ್ತೂರಿನಲ್ಲಿ ನ.3ರಂದು ಬೆಳಗ್ಗೆ ನಡೆದಿದೆ. ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆಎಸ್ಆರ್ ಟಿಸಿ ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ನಿಲ್ದಾಣದಿಂದ ಬಸ್ ಹೊರಡುವ ವೇಳೆ ವಿದ್ಯಾರ್ಥಿಯೋರ್ವ ರೈಟ್ ಪೋಯಿ ಎಂದು ಹೇಳಿದ್ದಾನೆ. ನಿರ್ವಾಹಕಣೆ ರೈಟ್ ಪೋಯ್ ಎಂದು ಹೇಳಿದ್ದಾಗಿ ಭಾವಿಸಿದ ಚಾಲಕ ಬಸ್ ಚಲಾಯಿಸಿದ್ದಾರೆ ಪುತ್ತೂರು ನಿಲ್ದಾಣದಿಂದ ಹೊರಟ […]Read More
ಉಪ್ಪಿನಂಗಡಿ : ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯ ಹಳೇ ಟರಣ್ಯ ತಪಾಸಣಾ ಕೇಂದ್ರದ ಬಳಿ ನ.3ರಂದು ನಡೆದಿದೆ. ಗಂಭೀರ ಗಾಯಗೊಂಡಿರುವ ಬೈಕ್ ಸವಾರ ಭರತ್ ಕುಮಾರ್(19) ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿಯಾಗಿದ್ದು, ಪೆಟ್ರೋಲ್ ಪಂಪೊಂದರಲ್ಲಿ ಕಾರ್ಮಿಕನಾಗಿದ್ದಾನೆ. ಈತ ಕಾರ್ಯನಿಮಿತ್ತ ಉಪ್ಪಿನಂಗಡಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇನ್ನೂ ಬೈಕ್ ಬಸ್ಸಿನಡಿಗೆ ಬಿದ್ದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು […]Read More