ಮಾಚಾರು ನಿವಾಸಿ, ಆಟೋ ಚಾಲಕ ಸುಧಾಕರ್ ಎಂಬವರು ನಾಪತ್ತೆಯಾಗಿದ್ದು ಇಂದು ಅವರ ದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂ 28 ರಂದು ಬೆಳಗ್ಗೆ ಆಟೋ ದಲ್ಲಿ ಮನೆಯಿಂದ ಹೊರಟವರು ಮತ್ತೆ ಮನೆಗೆ ವಾಪಾಸ್ಸಾಗದೆ ನಾಪತ್ತೆಯಾಗಿದ್ದರು. ಎಷ್ಟೆ ಹುಡುಕಾಡಿದರು ಸಿಗದ ಸುಧಾಕರ್ ಇದೀಗ ಬಜೆಗೊಳಿಯ ನೆಲ್ಲಿಕಾರ್ ಸಮೀಪದ ಕಾಡಿನಲ್ಲಿ ಆತ್ಮಹತ್ಯೆಯ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ 7 ಮಂದಿಯನ್ನು ಬಂಧಿಸಿರುವ ಘಟನೆ ಜೂನ್ 16 ರಂದು ನಡೆದಿದೆ. ಇಸ್ಪಿಟು ಎಲೆಗಳು, ನಗದು ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆRead More
ಕಳೆಂಜದಲ್ಲಿ ನಡೆದ ಹಲ್ಲೆ ಪ್ರಕರಣ: ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದನ್ನು
ಬೆಳ್ತಂಗಡಿ: ಕಳೆಂಜ ಗ್ರಾಮದಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಕುಶಾಲಪ್ಪ ಗೌಡ ರ ಮನೆಯ ಆವರಣದೊಳಗೆ ಬಿಜೆಪಿ ಕಾರ್ಯಕರ್ತ ರಾಜೇಶ್ ನುಗ್ಗಿ ಸುಡುಮದ್ದು ಸಿಡಿಸಿ ಮನೆಯಲ್ಲಿದ್ದ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ಎಸ್ ಸಿ ಘಟಕದ ಜಿಲ್ಲಾ ಅಧ್ಯಕ್ಷ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ ಮತ್ತು ಎಸ್ ಸಿ ಘಟಕದ ಗ್ರಾಮೀಣ ಅಧ್ಯಕ್ಷ ನೇಮಿರಾಜ ಕಿಲ್ಲೂರು ಹೇಳಿದರು. ಅವರು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆ ಇಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. […]Read More
ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ ಮರಾಠಿ ನಾಯ್ಕ ಸಮುದಾಯದ ಮೇಲೆ ಈ ರೀತಿಯ ಘಟನೆಗಳು ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಶೇಖರ್ ಲಾಯಿಲ ಅವರು ಹೆಳಿದರು. ಅವರು ಶ್ರೀ ಗುರುನಾರಾಯಣ ಸಭಾಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಚಾರು ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲ್ಲೆ ನಡೆಸಿದ ಕರುಣಾಕರ ಗೌಡ ಭಾಗಿಯಾಗಿದ್ದ, ಹೆಣ್ಣು […]Read More
ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದು ಇದೀಗ ಕಾಂಗ್ರೆಸ್ ಮುಖಂಡ ಕುಶಾಲಪ್ಪ ನನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲಿಸರು ಯಶಸ್ವಿಯಾಗಿದ್ದಾರೆ. ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷನಾ ಮೇಲೆ ತಲವಾರು ದಾಳಿ ನಡೆಸಿ ಮಲ್ಲೇಶ್ವರಂ ಗೆ ಪರಾರಿಯಾಗಲು ಯತ್ನಿಸಿದ ಆರೋಪಿ ಕುಶಾಲಪ್ಪ ಕಜೆನನ್ನು ಘಟನೆ ನಡೆದ 24 ಗಂಟೆಯೊಳಗಡೆ ಬಂಧಿಸುವಲ್ಲಿ ಯಶಸ್ವಿಯಾದ ಧರ್ಮಸ್ಥಳ ಪೊಲೀಸರು. ದಕ್ಷಿಣ ಕನ್ನಡ ಬಿಜೆಪಿ […]Read More
ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ ಘಟನೆ ನೆನ್ನೆ ರಾತ್ರಿ ನಡೆದಿದ್ದುಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಯೋಗ ಕ್ಷೇಮ ವಿಚಾರಿಸಲು ಇಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಸತೀಶ್ ಕುಂಪಲ ಮೊದಲಾದವರು ಭಾಗಿಯಾಗಿದ್ದರುRead More
ಬೆಳ್ತಂಗಡಿ; 2020 ರ ಜೂನ್ 26 ರಂದು ಉಜಿರೆಯ ಓಡಲ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರ ಕೈ ಕಾಲು ಕಟ್ಟಿಹಾಕಿ ನಗ- ನಗದು ದರೋಡೆ ಮಾಡಿದ ಪ್ರಕರಣವನ್ನು ನಾಲ್ಕು ವರ್ಷಗಳ ಬಳಿಕ ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ.ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ಅಡಿಕೆ ವ್ಯಾಪಾರಿ ರಿಯಾಝ್(41), ಆತನ ಸಹೋದರ ಬೆಂಗಳೂರಿನಲ್ಲಿ ಸರ್ವಿಸ್ ಸ್ಟೇಷನ್ ನಡೆಸುತ್ತಿರುವ ನವಾಝ್ […]Read More
ಬೆಳ್ತಂಗಡಿ; ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿಯ ಹತ್ಯೆ ನಡೆದಿದ್ದ ಶಂಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದೆ. ರಾಜ್ಯ ಸರಕಾರ ಈ ಪ್ರಕರಣಕ್ಕೆ ಸಂಬಂಧಿಸಿ ಸ್ಪೆಷಲ್ ಇನ್ವೆಸ್ಟಿಗೇಷನ್ ತಂಡ ನೇಮಿಸಿ ಸೂಕ್ತ ತನಿಖೆ ನಡೆಸಬೇಕೆಂದು ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಆಗ್ರಹಿಸಿದರು. ವ್ಯವಹಾರ ನಿಮಿತ್ತ ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56) […]Read More