ಪ್ರಸಿದ್ಧ ಕೈಗಾರಿಕೋದ್ಯಮಿ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ಸೇವೆಯನ್ನು ಸಲ್ಲಿಸಿರುವ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ 2024 ಆಯ್ಕೆಯಾಗಿದ್ದು, ಇಂದು ಬೆಂಗಳೂರಿನ ರವೇಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ದೇವೇಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸದರು. ಈ ವೇಳೆ ನಟ ಎಸ್ ನಾರಾಯಣ್ , ದೂರದರ್ಶನ ಚಂದನದ ಮಹೇಶ್ ಜೋಶಿ , ಹಲವಾರು ಗಣ್ಯರು ಭಾಗಿಯಾಗಿದ್ದರು
ವಾಣಿ ಪದವಿ ಪೂರ್ವ ಕಾಲೇಜಿನ ಸಾತ್ವಿಕ್ ಎಲ್ ಕೆ ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ
ಬೆಳ್ತಂಗಡಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಇವರು ಜನವರಿಯಲ್ಲಿ ನಡೆಸಿದ ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ಎಲ್ ಕೆ ಇವರು 98.11 ಪರ್ಸೆಂಟೈಲ್ ಅಂಕಗಳಿಸಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಈ ಸಾಧನೆಗೆ ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ , ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ಹರ್ಷ ವ್ಯಕ್ತ ಪಡಿಸಿದರು.Read More
ಮರೋಡಿ: ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಕಂಬಳ ಕ್ಷೇತ್ರದ ಸಾಧಕ ಮರೋಡಿ ಗ್ರಾಮದ
ಮರೋಡಿ: ಕರ್ನಾಟಕ ಸರಕಾರದ 2022ನೇ ಸಾಲಿನ ಯುವ ಸಬಲೀಕರಣ ಇಲಾಖೆಯಿಂದ ನೀಡುವ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳ ಓಟಗಾರ ಶ್ರೀಧರ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.Read More
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆಯಲ್ಲಿ ಪದವಿ ಶಿಕ್ಷಣವನ್ನು ಪಡೆದಿರುವ ರಕ್ಷಿತಾ ಎಂ ಬಿ ಇವರು ಭಾರತೀಯ ಸೇನೆಯ ಪ್ಯಾರಾ ಮಿಲಿಟರಿ ಫೋರ್ಸ್ SSCGD ಅಸ್ಸಾಂ ರೈಫಲ್ಸ್ ಗೆ ಆಯ್ಕೆಯಾಗಿದ್ದಾರೆ. ಇವರು ಮೂಲತಃ ಸುಳ್ಯ ತಾಲೂಕಿನ ಐವರ್ನಾಡಿಯವರಾಗಿದ್ದು ಪ್ರಸ್ತುತ ಧರ್ಮಸ್ಥಳದ ಪಾಂಗಾಳದಲ್ಲಿ ವಾಸವಿದ್ದಾರೆ. ಈಕೆ ಭಾಸ್ಕರ ಮಡ್ತಿಲ ಮತ್ತು ಮಮತಾ ದಂಪತಿಗಳ ಸುಪುತ್ರಿ. ಇವರಿಗೆ ಶಾಸಕರಾದ ಹರೀಶ್ ಪೂಂಜರವರು ಶಾಲು ಹೊದಿಸಿ ಗೌರವವನ್ನು ಸಲ್ಲಿಸಿದ್ದಾರೆ.Read More
ಭಾರತೀಯ ಸೇನೆಯ ಅಗ್ನಿಪಥ ಯೋಜನೆಗೆ ಅಗ್ನಿವೀರರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ 4 ಜನ
ಬೆಳ್ತಂಗಡಿ: ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅಗ್ನಿವೀರರಾಗಿ ನಾಲ್ಕು ಜನ ಆಯ್ಕೆಗೊಂಡಿರುವುದು ಶ್ಲಾಘನೀಯ. ಭಾರತೀಯ ಭೂ ಸೇನೆ ತಾಂತ್ರಿ ವಿಭಾಗಕ್ಕೆ ಬೆಳ್ತಂಗಡಿ ತಾಲೂಕಿನ ಧನುಷ್ ಗೌಡ, ಭಾರತೀಯ ನೌಕಾ ಸೇನೆಗೆ ಸೂರಜ್ ಶೆಟ್ಟಿ, ಭಾರತೀಯ ಭೂ ಸೇನೆಗೆ ರಜನೀಶ್ ಹಾಗೂ ವಿಜೇತ್ ಆಯ್ಕೆಗೊಂಡಿದ್ದಾರೆ. ಇವರಿಗೆ ಬೆಳ್ತಂಗಡಿ ತಾಲೂಕಿನ ಜನತೆಯ ಪರವಾಗಿ ಬೆಳ್ತಂಗಡಿ ಶಾಸಕರು ಹರೀಶ್ ಪೂಂಜ ಅಭಿನಂದನೆಯನ್ನು ತಿಳಿಸಿದ್ದಾರೆ.Read More
ಉಜಿರೆ: ಸಮಾಜ ಸೇವೆ ಕ್ಷೇತ್ರದಲ್ಲಿ ಉಜಿರೆಯ ” ಬದುಕು ಕಟ್ಟೋಣ ಬನ್ನಿ” ತಂಡವನ್ನು ಜಿಲ್ಲಾಡಳಿತದ 2022-2023 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ಇನ್ನೂರಕ್ಕಿಂತಲು ಅಧಿಕ ಕಾರ್ಯಕರ್ತರನ್ನು ಒಳಗೊಂಡ ಬದುಕುಕಟ್ಟೋಣ ಬನ್ನಿ ತಂಡವು ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಸಂತ್ರಸ್ತರ ಪಾಲಿಗೆ ಬೆಳಕಾಗದ ಬದುಕು ಕಟ್ಟೋಣ ಬನ್ನಿ ಇದೀಗ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ. ಅಕ್ಕ-ತಂಗಿಯರ ಬಾಳಿಗೆ ಬೆಳಕಾದ “ಬದುಕು ಕಟ್ಟೋಣ ಬನ್ನಿ” […]Read More
ರಾಜ್ಯಮಟ್ಟದ ಜೋಡಿ ನೃತ್ಯ ಸ್ಪರ್ಧೆಯಲ್ಲಿ ಸಾರ್ವಜನಿಕ ವಿಭಾಗದಲ್ಲಿ ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್
ಬೆಳ್ತಂಗಡಿ: ಇತ್ತೀಚೆಗೆ ನಡೆದ ನಾಟ್ಯ ವಿನೋದ ಕಲಾ ತಂಡ ಕಳಸ ಇವರು ನಡೆಸಿದ ರಾಜ್ಯಮಟ್ಟದ ಜೋಡಿ ನೃತ್ಯ ಸ್ಪರ್ಧೆಯಲ್ಲಿ ಸಾರ್ವಜನಿಕ ವಿಭಾಗದಲ್ಲಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯ ಬೆಳ್ತಂಗಡಿಯ ವಿದ್ಯಾರ್ಥಿ ಗಳಾದ ರಿತ್ವಿಕ್ ಕೆ.ಪಿ ಮತ್ತು ವಂಶಿಕ ಇವರು ಜೋಡಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವೈಯಕ್ತಿಕ ವಿಭಾಗದಲ್ಲಿ ವಂಶಿಕ ದ್ವಿತೀಯ ಹಾಗೂ ರಿತ್ವಿಕ್ ತೃತೀಯ ಸ್ಥಾನ ಪಡೆದುಕೊಂಡು ಸಂಸ್ಥೆ ಹಾಗೂ ಬೆಳ್ತಂಗಡಿಗೆ ಹೆಗ್ಗಳಿಕೆ ತಂದಿರುತ್ತಾರೆ . ಇವರು ಜಿತೇಶ್ ಕುಮಾರ್ ನೇತೃತ್ವದ ಬೀಟ್ ರಾಕರ್ಸ್ […]Read More
ಉಜಿರೆ: ಸಾನಿಧ್ಯ ಕೇಂದ್ರದ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕನಸಿನ ಮನೆ ನಾವಿಕ ಮೋಹನ್
ಉಜಿರೆ: ಕನಸಿನ ಮನೆ ನಾವಿಕ, ವಿಜಯ ರತ್ನ ಪ್ರಶಸ್ತಿ ಪುರಸ್ಕೃತ , ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ , ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಅವರ ಹುಟ್ಟುಹಬ್ಬವನ್ನು ಉಜಿರೆಯ ಛತ್ರಪತಿ ಶಿವಾಜಿ ಸೇವಾ ಟ್ರಸ್ಟ್ ವಿಶೇಷವಾಗಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಅ.2 ರಂದು ಜನುಮದಿನವನ್ನು ಆಚರಿಸಿಕೊಂಡರು. ಸಾನಿಧ್ಯ ಕೇಂದ್ರದ ಸಂತ್ರಸ್ತ ಮಕ್ಕಳಿಂದಲೇ ಕೇಕ್ ಕತ್ತರಿಸುವ ಮೂಲಕ ಮೋಹನ್ ಕುಮಾರ್ ಜನುಮ ದಿನವನ್ನು ವಿನೂತನವಾಗಿ ಆಚರಿಸಿ ಮಾತನಾಡಿದ […]Read More
ಉಜಿರೆ: ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನ ಕಟ್ಟಿ, ಚಾರ್ಮಾಡಿಯ ಕೊಳಂಬೆ ಎಂಬಲ್ಲಿ ನದಿ ಪ್ರವಾಹಕ್ಕೆ ತುತ್ತಾಗಿ ಮನೆ ಮತ್ತು ತಮ್ಮ ಜೀವನ ಮಾರ್ಗವಾಗಿದ್ದ ಕೃಷಿಯನ್ನ ಕಳೆದುಕ್ಕೊಂಡಿದ್ದ ಕುಟುಂಬಗಳಿಗೆ ಮತ್ತೆ ಅದೇ ಜಾಗದಲ್ಲಿ ತಲೆ ಎತ್ತಿ ನಿಲ್ಲುವಂತೆ ತಮ್ಮ ಸೇವೆಯ ಮೂಲಕ ಮಾಡಿ, ನದಿ ಸ್ವಚ್ಛಗೊಳಿಸುವ ಮೂಲಕಮನೆ ಮಾತಾಗಿ, ಯಾವುದೆ ಫಲಾಪೇಕ್ಷಾವಿಲ್ಲದೆ ಸಮಾಜಮುಖಿ ಕೆಲಸಗಳನ್ನ ಮಾಡಿ ಮನೆ ಮನ ಸೇರಿರುವ ಲಕ್ಷ್ಮೀ ಗ್ರೂಪ್ ನ ಮೋಹನಣ್ಣ ಎಂದೆ ಅತ್ಮೀಯರಾಗಿರುವ ಶ್ರೀ ಮೋಹನ ರವರಿಗೆ ವಿಜಯ ಸಂಕೇಶ್ವರರವರ ನೇತೃತ್ವದ […]Read More
ಬೆಳ್ತಂಗಡಿ: ದ. ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಉಪನ್ಯಾಸಕರುಗಳ ಸಂಘ ,ದೈಹಿಕ ಶಿಕ್ಷಣ ಉಪನ್ಯಾಸಕ ಸಂಘ ಮತ್ತು ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಸೆ 11ರಂದು ಸ್ಕೌಟ್ ಗೈಡ್ಸ್ ಭವನ ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತ ನೀಡಲಾಯಿತು.Read More