ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಆಚರಣಾ ಸಮಿತಿ ವತಿಯಿಂದ ಬದುಕು ಕಟ್ಟೋಣ ಬನ್ನಿ ತಂಡ ಕ್ಕೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ನ.1ರಂದು 2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿರುವ ಮೋಹನ್ ಕುಮಾರ್ ಹಾಗೂ ಸಂಧ್ಯಾ ಟ್ರೇಡರ್ಸ್ ಮಾಲಕರು ರಾಜೇಶ್ ಪೈ ಯವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನವನ್ನು ಸ್ವೀಕರಿಸಿ ಪ್ರಶಸ್ತಿಯೊಂದಿಗೆ ಉಜಿರೆ ಪೇಟೆಗೆ ಆಗಮಿಸಿದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ […]
ಮಂಗಳೂರು: ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಭಾರೀ ಸದ್ದು ಮಾಡಿದ್ದು ಈ ಸಿನಿಮಾವನ್ನು ನೋಡದ ಜನ ಇಲ್ಲ ಅನ್ನುವಂತಾಗಿದೆ. ಸಿನಿಮಾ ಅಷ್ಟರ ಮಟ್ಟಿಗೆ ಜನರನ್ನು ಸೆಳೆಯುತ್ತಿದೆ. ಅ.21 ರಂದು ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಸಿನಿಮಾ ವೀಕ್ಷಣೆ ಬಳಿಕ ಚಿತ್ರವನ್ನು ಹಾಗೂ ಚಿತ್ರ ತಂಡವನ್ನು ಹಾಡಿ ಹೊಗಳಿದ್ದು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ತುಳುನಾಡಿ ದೈವಾರಾಧನೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ […]Read More
ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಿ, ಡಿಜಿ ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಜೆ- ಐ ಜಿ ಪಿ ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ ನಿಯಮ ಉಲ್ಲಂಘಿಸಿದರೆ 1000ರೂ ದಂಡ ಪಾವತಿಸಬೇಕು ಈ ನಿಯಮ ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದರುRead More
ಇಂದಿನಿಂದ ರಾಜ್ಯದಾದ್ಯಂತ ಹಲಾಲ್ ಅಭಿಯಾನ: ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು
ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಹಿಂದೂ ಪರ ಸಂಘಟನೆಗಳು ಹಲಾಲ್ ಅಭಿಯಾನಕ್ಕೆ ಕರೆಕೊಟ್ಟಿದೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಸಂಘಟನೆಗಳು ಕರೆ ನೀಡಿದೆ. ಬೆಂಗಳೂರಿನಲ್ಲಿ ಮಹಾಸಭೆ ನಡೆಸಿರುವ ಹಿಂದೂ ಸಂಘಟನೆಗಳು ಇಂದಿನಿಂದ ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಸಂಘಟನೆಗಳು ಕರೆಕೊಟ್ಟಿದೆ. ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸಿದಂತೆ ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತೇವೆ ನಮ್ಮ ಅಭಿಯಾನ ರಾಜ್ಯಾದ್ಯಂತ […]Read More
ಹಿಂದೂ ಧರ್ಮದ ಪ್ರಚಾರ ಹಾಗೂ ರಕ್ಷಣೆಯ ಕೆಲಸಕ್ಕಾಗಿ ದೇಶದಾದ್ಯಂತ ಸಂಚರಿಸುತ್ತಿರುವ ಶ್ರೀ ಬ್ರಹ್ಮಾನಂದ
ಬೆಳ್ತಂಗಡಿ: ಹಿಂದೂ ಧರ್ಮದ ಪ್ರಚಾರ ಹಾಗೂ ರಕ್ಷಣೆಯ ಕೆಲಸಕ್ಕಾಗಿ ದೇಶದಾದ್ಯಂತ ಸಂಚರಿಸುತ್ತಿರುವ ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಭದ್ರತೆಯ ದೃಷ್ಟಿಯಿಂದ ಸರಕಾರ ಅಂಗರಕ್ಷಕರ ವ್ಯವಸ್ಥೆಯನ್ನು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯಲ್ಲಿ ಮಠಗಳು, ಶಿಕ್ಷಣ ಸಂಸ್ಥೆಗಳನ್ನು ಮಾಡಿ ಉಚಿತ ಶಿಕ್ಷಣ, ಅನ್ನ ದಾಸೋಹ ನೀಡುತ್ತಿರುವ ಸ್ವಾಮೀಜಿಯವರು ಉತ್ತರ ಕನ್ನಡ ಜಿಲ್ಲೆಯ ಅತಿ ಸೂಕ್ಷ್ಮಾತಿ ಸೂಕ್ಷ್ಮ ಪ್ರದೇಶವಾಗಿರುವಂತಹ ಭಟ್ಕಳದಲ್ಲಿ ಕೂಡ ಶಾಖಾಮಠಗಳನ್ನು ನಿರ್ಮಾಣ […]Read More
ಬೆಂಗಳೂರು: ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಹಂತಕ್ಕೆ ತಲುಪುವ ಮುನ್ನ ಅವರ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಠಿಯಿಂದ 5ಮತ್ತು 8ನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಈ ವರ್ಷದಿಂದಲೇ ಆರಂಭಿಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ ನಾಗೇಶ್ ಅವರು ತಿಳಿಸಿದ್ದಾರೆ. ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಅ.13ರಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 10ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವ ಮುನ್ನ 5 ಮತ್ತು 8ನೇ […]Read More
ಬೆಂಗಳೂರು/ಮಂಗಳೂರು, ಅ. 11: ಪ್ಯಾಕೇಜ್ ಟೂರ್ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್ಆರ್ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್ಗಳನ್ನು ರೂಪಿಸಲಾಗಿದೆ.ಕೆಎಸ್ಆರ್ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್ಆರ್ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದೀಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ […]Read More