ಉಜಿರೆ : ನಿಮ್ಮಲ್ಲಿ ಇರುವ ಧೈರ್ಯ, ಚಾಕಕ್ಯತೆ, ಕ್ರಿಯಾಶೀಲತೆ ನೋಡಿ ನೀವು ನಿಜವಾಗಿಯೂ ಯಶಸ್ಸು ಕಾಣುತ್ತೀರಿ ಎಂದು ಭಾವಿಸುತ್ತೇನೆ. ನೀವು ಒಟ್ಟಿಗೆ ಸೇರಿ ಕಲಿಯುವುದರಿಂದ ಇನ್ನೊಬ್ಬರನ್ನು ತುಳಿದು ಬದುಕು ಸಾಮರ್ಥ್ಯ ವ್ಯರ್ಥ. ಆದರೆ ಇನ್ನೊಬ್ಬರನ್ನು ಅರಿತು ಜೊತೆಯಾಗಿ ಬದುಕಿ ಬಾಳುವುದು ಸಾಮರ್ಥ್ಯ ಎಂದು ಕಾಣುತ್ತದೆ. ಬೇರೆ ಬೇರೆ ಊರುಗಳಿಂದ ಬೇರೆ ಬೇರೆ ಹಿನ್ನಲೆಯನ್ನು ಹೊಂದಿರುವ ನೀವು ರುಡ್ ಸೆಟ್ ಸಂಸ್ಥೆಗೆ ಬಂದು ಒಟ್ಟಾಗಿ ಒಂದೇ ಮನೆಯವರಾಗಿ ಕಲಿತ್ತಿದ್ದೀರಿ ತುಂಭಾ ಸಂತೋಷ. ಇದನ್ನು ಮುಂದುವರೆಸಿ. ಈ ಸಂಸ್ಥೆಯಲ್ಲಿ […]
ಕಾಜೂರು ಉರೂಸ್ ಪ್ರಯುಕ್ ಪ್ರತಿದಿನ ಉಪನ್ಯಾಸ ಮಾಲಿಕೆ: ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ,
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಸರ್ವಧರ್ಮೀಯ ಸಮನ್ವಯ ಶ್ರದ್ಧಾ ಕೇಂದ್ರ ಕಾಜೂರು ಮಖಾಂ ಶರೀಫ್ ಉರೂಸ್ ಪ್ರಯುಕ್ತ ಜ.24 ರಿಂದ ಪ್ರತಿದಿನ ರಾತ್ರಿ ಪ್ರಖ್ಯಾತ ಧಾರ್ಮಿಕ ವಿದ್ವಾಂಸರಿಂದ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ. ಸಯ್ಯಿದ್ ಕಾಜೂರು ತಂಙಳ್ ರಿಂದ ಉದ್ಘಾಟನೆಗೊಂಡ ಈ ಪ್ರವಚನ ಮಾಲಿಕೆಯಲ್ಲಿ ಕಿಲ್ಲೂರು ಖತೀಬ್ ಶಂಶೀರ್ ಸಖಾಫಿ ಪರಪ್ಪು, ಮುಹಮ್ಮದ್ ತೌಸೀಫ್ ಸಅದಿ ಹರೇಕಳ, ಯಾಸಿರ್ ಸಖಾಫಿ ಅಲ್ಅಝ್ಹರಿ ಮಲಪ್ಪುರಂ, ಅಬೂಬಕ್ಕರ್ ಸಿದ್ದೀಕ್ ಜಲಾಲಿ ಕಕ್ಕಿಂಜೆ, ಅಬ್ದುಲ್ ಅಝೀಝ್ ಅಶ್ರಫಿ ಪಾಣತ್ತೂರು, ಮುಹಮ್ಮದ್ ಇರ್ಷಾದ್ ಸಖಾಫಿ […]Read More
ಕನ್ಯಾಡಿ:ಮಹಾ ಕುಂಭಮೇಳದಲ್ಲಿ ಕನ್ಯಾಡಿ ಧರ್ಮಸ್ಥಳ ಇಲ್ಲಿಯ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಶ್ರೀ ಶ್ರೀ
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಂ ಕನ್ಯಾಡಿ ಧರ್ಮಸ್ಥಳ ಇಲ್ಲಿಯ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ರಥೋತ್ಸವRead More
ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಓದಿನ ಕೌಶಲ್ಯ, ಪರೀಕ್ಷೆಗಾಗಿ
ಧರ್ಮಸ್ಥಳ: ಎಸ್.ಡಿ.ಎಮ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗಳ ತಯಾರಿ, ಸಮಯ ನಿರ್ವಹಣೆ ಮತ್ತು ಅಧ್ಯಯನದ ಉತ್ತಮ ವಿಧಾನಗಳ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ರೆಸಿಡೆನ್ಷಿಯಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುನಿಲ್ ಪಂಡಿತ್ ಅವರು ಮುಖ್ಯ ಉಪನ್ಯಾಸವನ್ನು ನೀಡಿದರು. ಅವರು ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ವಿವಿಧ ಅಧ್ಯಯನ ತಂತ್ರಗಳು, ಸಮಯ ನಿರ್ವಹಣೆ, ಹಾಗೂ ಅಧ್ಯಯನದಲ್ಲಿ ಸಾಮರ್ಥ್ಯವನ್ನು ಹೇಗೆ ಬೆಳಸಬಹುದು ಎಂಬುದನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಗುಂಪು ಚರ್ಚೆಗಳು ಮತ್ತು ಚಟುವಟಿಕೆಗಳನ್ನು ಆಯೋಜಿಸಿ, ವಿದ್ಯಾರ್ಥಿಗಳ […]Read More
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ
ಬಂದಾರು :ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ 26 ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಶ್ರೀ ಕ್ಷೇತ್ರದಿಂದ ರೂ 2.00 ಲಕ್ಷ ಸಹಾಯಧನ ಚೆಕ್ ಬೆಳ್ತಂಗಡಿ ತಾಲ್ಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ರವರು […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದ ಪಿನಾಕಿ ಸಭಾಂಗಣದಲ್ಲಿ ಜನವರಿ 25 ರಂದು ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ತಂಗಡಿ, ಪುತ್ತೂರು ಮತ್ತು ಮಂಗಳೂರಿನ ಶಾಖೆಗಳ ಪದಾಧಿಕಾರಿಗಳಿಗೆ ಒಂದು ದಿನದ ಕಾರ್ಯಗಾರವನ್ನು ಯಶಸ್ವಿಯಾಗಿ ಆಯೋಜಿಸಿತು. 13 ವರ್ಷಗಳ ಇತಿಹಾಸ ಹೊಂದಿರುವ ಈ ಸಂಸ್ಥೆ, ‘ಸಾಧನೆ ಸಾಧಕನ ಸೊತ್ತೇ ಹೊರತು ಸೋಮಾರಿಯ ಸೊತ್ತಲ್ಲ’ ಎಂಬಂತೆ ಡಾ. ವಿ. ಸಮೃದ್ಧಿ ಮಂಜುನಾಥ್ ಅವರ ದಕ್ಷ ನಾಯಕತ್ವದಲ್ಲಿ ರಾಜ್ಯದಾದ್ಯಂತ ಹಲವಾರು ಶಾಖೆಗಳನ್ನು ಸ್ಥಾಪಿಸಿ, ನಿರುದ್ಯೋಗಿಗಳಿಗೆ ಉತ್ತಮ ವೇತನದ ಉದ್ಯೋಗಾವಕಾಶಗಳನ್ನು ಒದಗಿಸುತ್ತಿದೆ. […]Read More
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಸ. ಹಿ . ಪ್ರಾ ಶಾಲೆಯಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ಜ 26 ರಂದು ನಡೆಯಿತು. ಬಂದಾರು ಗ್ರಾಮ ಪಂಚಾಯತು ಸದಸ್ಯರಾದ ಶ್ರೀಮತಿ ಅನಿತಾ ಇವರು ಧ್ವಜಾರೋಹಣ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯೆ ವಾಣಿ ಹಾಗೂ ಇನ್ನಿತರ ಪ್ರಮುಖ ಗಣ್ಯರು ಭಾಗವಹಿಸಿದ್ದರು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು,ಈ ಕಾರ್ಯಕ್ರಮದಲ್ಲಿ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.Read More
ಭಕ್ತರ ಕಷ್ಟಗಳಿಗೆ ಓಗೊಟ್ಟು ಕ್ಷಣಮಾರ್ಧದಲ್ಲಿ ಪರಿಹಾರವನ್ನು ನೀಡಿ ಕಾರ್ಣಿಕ ಮೆರೆವ ಆರಿಕೋಡಿ ಶ್ರೀ
ಆರಿಕೋಡಿ: ಇತಿಹಾಸ ಪ್ರಸಿದ್ಧ ಕಾರ್ಣಿಕ ದೇವಾಲಯಗಳಲ್ಲಿ ಒಂದಾದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಾಲಯದ ಪವಾಡಗಳು ದಿನೇ ದಿನೇ ಭಕ್ತರನ್ನು ದೇವಾಲಯಕ್ಕೆ ಆಗಮಿಸುವಂತೆ ಮಾಡುತ್ತಿದೆ. ತಾಯಿಯ ಮಹಿಮೆ ರಾಜ್ಯದ ಮೂಲೆ ಮೂಲೆಗೂ ತಿಳಿದು ಜನಸಾಗರವೆ ಸನ್ನಿಧಾನಕ್ಕೆ ಜಗನ್ಮಾತೆಯನ್ನು ಕಣ್ತುಂಬಿಸಲು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ. ಭಕ್ತರ ಕಷ್ಟಗಳಿಗೆ ಓಗೊಟ್ಟು ಕ್ಷಣಮಾರ್ಧದಲ್ಲೇ ಪರಿಹಾರವನ್ನು ನೀಡುವ ದೇವಿಯ ಪವಾಡ ನಿಜಕ್ಕೂ ಅದ್ಭುತ. ಕಡಬ ತಾಲೂಕಿನ ಸವಣೂರು ಪೆರಣೆ ಪದ್ಮಯ್ಯ ಗೌಡ ಎಂಬವರ ಭೂಮಿಯಲ್ಲಿ ನೀರಿನ ಅಭಾವ ಕಂಡುಬಂದಾಗ ಪದ್ಮಯ್ಯ ಗೌಡ ಅವರಿಗೆ […]Read More
ಜಾತ್ರೆ-ಉತ್ಸವಗಳ ವೇಳೆ ದೇವಸ್ಥಾನಗಳ ಬಳಿ ವ್ಯಾಪಾರ ವಹಿವಾಟಿಗೆ ಕೇವಲ ಹಿಂದೂಗಳಿಗೆ ಅವಕಾಶ ನೀಡಿ
ಬೆಂಗಳೂರು : ದೇವಸ್ಥಾನಗಳ ಜಾತ್ರೆ, ಉತ್ಸವ ಇತ್ಯಾದಿ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ದೇವರ ಮೇಲೆ ಶ್ರದ್ಧೆ ಇರುವವರಿಗೆ ಮಾತ್ರ ವಹಿವಾಟು ಮಾಡಲು ಅವಕಾಶ ನೀಡಬೇಕು ಮತ್ತು ಅನ್ಯ ಮತೀಯರಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಮತ್ತು ದೇವಸ್ಥಾನಗಳ ರಕ್ಷಣೆಗಾಗಿ ಮಂದಿರ ಅಧಿವೇಶನದಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಜನವರಿ 21, ಮಂಗಳವಾರ ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ […]Read More