ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸಂದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಕುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಮಾಡಿದೆ. ನ್ಯಾಯಾವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾಂಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವಡಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.
ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿ, ಇದೀಗ ತನ್ನೂರಿಗೆ ವಾಪಾಸ್ಸಾಗುತ್ತಿದ್ದು ನಾಳೆ ವಿಜಯೋತ್ಸವ ಮೆರವಣಿಗೆಯು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆಯು ನಾಳೆ(ಜೂನ್ 29) ರಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ವಿಜಯೋತ್ಸವದ ಮೂಲಕ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ. ನಾಳೆ ಸಂಜೆ 5 ಗಂಟೆಗೆ ಕಾವೂರು ಬಿಜೆಪಿ ಕಚೇರಿ ಬಳಿ […]Read More
ದೆಹಲಿ: ರಾಜ್ಯಸಭಾ ಸದಸ್ಯರು, ಪದ್ಮಶ್ರೀ ಪುರಸ್ಕೃತರಾದ ಸುಧಾಮೂರ್ತಿಯವರನ್ನು ಭೇಟಿ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ
ದೆಹಲಿಯಲ್ಲಿ ನಡೆದ ಕೇಂದ್ರ ಸಚಿವರ ಮತ್ತು ಸಂಸದರ ಸಭೆಯ ಬಳಿಕ ರಾಜ್ಯಸಭಾ ಸದಸ್ಯರು ಪದ್ಮಶ್ರೀ ಪುರಸ್ಕೃತರಾದ ಸುಧಾಮೂರ್ತಿ ಅವರನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು. ಈ ವೇಳೆ ಮೇಲ್ಮನೆಯಲ್ಲಿ ಸುಧಾ ಮೂರ್ತಿ ಅವರ ಪ್ರಾತಿನಿಧ್ಯವು ನಮ್ಮ ನಾಡಿನ ನಾರಿ ಶಕ್ತಿಯ ಪ್ರತೀಕವಾಗಿದೆ ಅಂತ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ಇನ್ಫೆಂಟ್ರಿ ಅಧಿಕಾರಿ ಡೆಪ್ಯೂಟಿ ಚೀಫ್ ಆಫ್ ಆರ್ಮಿ ಸ್ಟಾಫ್ ಲೆಫ್ಟಿನೆಂಟ್ ಜನರಲ್ ತರುಣ್ ಕುಮಾರ್ ಐಚ್ ಅವರನ್ನು ಸೇನಾ ಮುಖ್ಯಾಲಯದಲ್ಲಿ ಸಂಸದ ಕ್ಯಾಪ್ಟನ್ […]Read More
ಬೆಂಗಳೂರು: ರಾಜ್ಯಾದ್ಯಂತ ಕಬಾಬ್ , ಫಿಶ್, ಚಿಕನ್ ಗೆ ಬಳಸುವ ಕೃತಕ ಬಣ್ಣವನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ ಗಳು ಗುಣಮಟ್ಟ ಕೃತಕ ಬಣ್ಣ ಬೆರೆಸುವಿಕೆಯಿಂದಾಗಿ ಕಳಪೆಯಾಗಿದೆ. 2011 ರ ನಿಯಮ 16.0. ಗಳಡಿ ಅವಕಾಶವಿಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್ ಚಿಕನ್ […]Read More
ಬೆಳ್ತಂಗಡಿ: ಗ್ಯಾರಂಟಿ ಯೊಜನೆಯ ಭಾರವನ್ನು ಕಾಂಗ್ರೆಸ್ ಸರಕಾರಕ್ಕೆ ತಡೆಯಲಾಗುತ್ತಿಲ್ಲ.ಅಂಗನವಾಡಿ ಆಶಾಕಾರ್ಯಕರ್ತರಿಗೆ ಹೆಚ್ಚಿನ ಅನುದಾನ ನೀಡುತ್ತೇವೆ ಎಂಬ ಭರವಸೆ ಭರವಸೆಯಾಗಿಯೇ ಉಳಿದೆದೆ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕಿಡಿ ಕಾರಿದರು. ಅವರು ಇಂದು ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರ ಇದೀಗ ಗ್ಯಾರಂಟಿ ಯೋಜನೆಯ ಭಾರವನ್ನು ಹೊರಲಾಗದೆ ಅಭಿವೃದ್ದಿಯನ್ನು ಮಾಡಲಾಗದೆ ಕಾರಣಗಳನ್ನು ಹುಡುಕುತ್ತಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸುತ್ತೇವೆ ಎಂದವರು ಯಾಕೆ ಈವರೆಗೂ […]Read More
ಮಂಗಳೂರು – 500 ವರ್ಷಗಳ ಸಂಘರ್ಷದ ನಂತರ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಪ್ರಭು ಶ್ರೀರಾಮ ಮಂದಿರವು ಹಿಂದೂ ರಾಷ್ಟ್ರದ ನಿರ್ಮಾಣದ ದಿಶೆಗೆ ಮೊದಲ ಹೆಜ್ಜೆಯಾಗಿದೆ ಎಂಬುದು ನಮ್ಮ ನಂಬಿಕೆಯಾಗಿದೆ; ಆದರೆ ಲೋಕಸಭಾ ಚುನಾವಣೆಯ ನಂತರ ದೇಶದ ಪರಿಸ್ಥಿತಿ ನೋಡಿದರೆ ಹಿಂದೂಗಳ ಸಮಸ್ಯೆಗಳನ್ನು ಪರಿಹರಿಸಲು ಹಿಂದೂಗಳ ಈಕೋಸಿಸ್ಟಮ್ ನಿರ್ಮಿಸಿ ವ್ಯವಸ್ಥಿತವಾಗಿ ಕಾರ್ಯ ಮಾಡುವುದು ಅವಶ್ಯಕವಾಗಿದೆ. ಈ ಬಾರಿ ಚುನಾವಣೆಯ ಸಮಯದಲ್ಲಿ ಬಿಡುಗಡೆಯಾದ ವರದಿಯಿಂದ ಭಾರತದಲ್ಲಿ 1950 ರಿಂದ 2015 ವರೆಗೆ, ೬೫ ವರ್ಷದ ಕಾಲಾವಧಿಯಲ್ಲಿ ಹಿಂದೂಗಳ ಜನಸಂಖ್ಯೆ ಸುಮಾರು ಶೇಕಡಾ […]Read More
ಒಂದು ಕಡೆ ಬೆಲೆ ಏರಿಕೆ ಜಾಸ್ತಿಯಾಗುತ್ತಿದ್ದಂತೆ ಸರ್ಕಾರ ಈಗ ಹೊಸ ರೂಲ್ಸ್ ಜಾರಿಗೆ ತರುತ್ತಿದೆ. ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್:ಗೃಹಜ್ಯೋತಿ ಯೋಜನೆಯ ಮೂಲಕ ಪ್ರತೀ ಮನೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ. ಒಂದು ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದರು ಸಹ ಪ್ರತಿ ಮನೆಗು ಅವರು ಪ್ರತಿ ತಿಂಗಳು ಎಷ್ಟು ವಿದ್ಯುತ್ ಬಳಸುತ್ತಿದ್ದರು ಎನ್ನುವುದರ ಮೇಲೆ ಲೆಕ್ಕ ಹಾಕಿ ಇಷ್ಟು ವಿದ್ಯುತ್ ಬಳಸಬಹುದು ಹೆಚ್ಚುವರಿಯಾಗಿ 10% ಯೂನಿಟ್ ನಷ್ಟು ವಿದ್ಯುತ್ ಬಳಸಬಹುದು ಎಂದು ಹೇಳಲಾಯಿತು. ಇಷ್ಟು […]Read More
ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ನಿಷೇಧಿಸುವಂತೆ ವಿ.ಹಿ.ಪ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ
ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಇಂದು ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನಿಡಲಾಯಿತ್ತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಜಿಲ್ಲಾ ಉಪಧ್ಯಾಕ್ಷರಾದ ಗುರು ಬಂಟ್ವಾಳ,ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರು ದಿನೇಶ್ ಚಾರ್ಮಾಡಿ,ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ,ಬಜರಂಗದಳ ಸಂಯೋಜಕರಾದ ಸಂತೋಷ್ ಆತ್ತಾಜೆ, ಗೋ ರಕ್ಷಾ ಪ್ರಮುಖ್ […]Read More
ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಚಂದ್ರಶೇಖರ ಆಚಾರ್ಯ ಮತ್ತು ಸರಸ್ವತಿ ಆಚಾರ್ಯ ಇವರ ಮಗಳು ಸುರಕ್ಷಾ ಆಚಾರ್ಯ ಚಿಕ್ಕಂದಿನಿಂದಲೂ ಎಲ್ಲಾ ಕಲೆಗಳಲ್ಲೂ ಆಸಕ್ತಿ ಹೊಂದಿದ್ದು ಎಲ್ಲಾ ಕಲೆಗಳಲ್ಲೂ ಸಾಧನೆ ಮಾಡಿ ಹಲವಾರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ಅರುಣ್ ಕುಮಾರ್ ಧರ್ಮಸ್ಥಳ ಇವರಿಂದ 3 ವರ್ಷಗಳ ಕಾಲ ಯಕ್ಷಗಾನ ತರಬೇತಿಯನ್ನು ಪಡೆದು ಮಂಗಳೂರು, ಧಾರವಾಡ, ಕಾರ್ಕಳ, ಶ್ರವಣಬೆಳಗೊಳ, ಚಿಕ್ಕಮಗಳೂರು ಹೀಗೆ ಮುಂತಾದ ಕಡೆಗಳಲ್ಲಿ ಯಕ್ಷಗಾನ ಪ್ರದರ್ಶನವನ್ನು ಮಾಡಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪೆನ್ಸಿಲ್ ಆರ್ಟ್, ಲೀಫ್ ಆರ್ಟ್, ವಾಲ್ […]Read More
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು,. ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ಬಿಸಿಲು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇನ್ನೊಂದು ವಾರದವರೆಗೆ ದೀರ್ಘ ಒಣಹವೆ ಇರುತ್ತದೆ ಎಂದು IMD ಮುನ್ಸೂಚನೆ ನೀಡಿದೆ. ಏಪ್ರಿಲ್ 19ರವರೆಗೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ತಿಳಿಸಿದೆ. ಭಾನುವಾರ ಸ್ವಲ್ಪ ಮೋಡ ಕವಿದ ವಾತಾವರಣವಿರಬಹುದು. ಆದರೆ ಮಳೆಯಾಗುವ ಸಾಧ್ಯತೆಗಳಿಲ್ಲ. ಸೋಮವಾರದಿಂದ ನಗರದಲ್ಲಿ ಒಣಹವೆ ಮುಂದುವರಿಯಲಿದೆ. ಆದಾಗ್ಯೂ, IMD ಯ ವಿಜ್ಞಾನಿಗಳು ಏಪ್ರಿಲ್ 20 ರ ನಂತರ ಸ್ವಲ್ಪ ಮಳೆಯ […]Read More