• July 27, 2024

2020 ರಲ್ಲಿ ಉಜಿರೆ ಓಡಲದಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣ : ಮೂವರು ಆರೋಪಿಗಳು ಪೊಲೀಸರ ವಶ

 2020 ರಲ್ಲಿ ಉಜಿರೆ ಓಡಲದಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣ : ಮೂವರು ಆರೋಪಿಗಳು ಪೊಲೀಸರ ವಶ

ಬೆಳ್ತಂಗಡಿ; 2020 ರ ಜೂನ್ 26 ರಂದು ಉಜಿರೆಯ ಓಡಲ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಎಂಬವರ ಮನೆಗೆ ನುಗ್ಗಿ ಮನೆಯವರ ಕೈ ಕಾಲು ಕಟ್ಟಿಹಾಕಿ ನಗ- ನಗದು ದರೋಡೆ ಮಾಡಿದ ಪ್ರಕರಣವನ್ನು ನಾಲ್ಕು ವರ್ಷಗಳ ಬಳಿಕ ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ಅಡಿಕೆ ವ್ಯಾಪಾರಿ ರಿಯಾಝ್(41), ಆತನ ಸಹೋದರ ಬೆಂಗಳೂರಿನಲ್ಲಿ ಸರ್ವಿಸ್ ಸ್ಟೇಷನ್ ನಡೆಸುತ್ತಿರುವ ನವಾಝ್ (38) ಮತ್ತು ಬೆಂಗಳೂರು‌ ನಿವಾಸಿ ಕೃಷ್ಣ (37) ಎಂಬವರೆಂದು ಗುರುತಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರು ಆರೋಪಿಗಳು ಇರುವುದಾಗಿ ಮಾಹಿತಿ‌ ನೀಡಿದ್ದಾರೆ.

ಪೊಲೀಸ್ ಬಾತ್ಮೀದಾರರ ಮೂಲಕ ಬಂದ ಮಾಹಿತಿಯಂತೆ ಅಂದು ದರೋಡೆ ನಡೆಸಿದ ಚಿನ್ನಾಭರಣಗಳನ್ನು ಆರೋಪಿ ರಿಯಾಝ್ ಎಂಬಾತ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವ ಬಗ್ಗೆ ತಿಳಿದು ಬಂದಿದ್ದು ಅಂತೆಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಆಭರಣ ಸಮೇತ ದಸ್ತಗಿರಿ ಮಾಡಿದ್ದಾರೆ. ವಿಚಾರಣೆ ವೇಳೆ ಸಹೋದರ ನವಾಝ್ ಮತ್ತು ಕೃಷ್ಣ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ. ಕೃಷ್ಣ ಧರ್ಮಸ್ಥಳದಲ್ಲಿ ಇರುವುದಾಗಿ ರಿಯಾಝ್ ಮಾಹಿತಿ ನೀಡಿದಂತೆ ಆರಂಭಿಕವಾಗಿ ಒಟ್ಟು ಮೂವರನ್ನೂ ವಿದೀಗ ಬಂಧಿಸಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!