• October 27, 2024

ದಿಡುಪೆ: ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು

 ದಿಡುಪೆ: ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು

 

ದಿಡುಪೆ: ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ.

14 ವರ್ಷದ ಶ್ರೀಷಾ ಮೃತ ಬಾಲಕ. ಈತ 8ನೇ ತರಗತಿ ವಿದ್ಯಾರ್ಥಿ. ಭಾನುವಾರ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿ ಉಯ್ಯಾಲೆ ಆಟವಾಡುತ್ತಿದ್ದ. ಮನೆಯವರು ಬಂದು ನೋಡಿದಾಗ ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಬಾಲಕ ನೆಲದಲ್ಲಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಯಾವುದೇ ಪ್ರಯೋಜನವಾಗಿಲ್ಲ. ಅಷ್ಟೊತ್ತಿಗಾಗಲೇ ಬಾಲಕ ಇಹಲೋಕ ತ್ಯಜಿಸಿದ್ದಾನೆ.

Related post

Leave a Reply

Your email address will not be published. Required fields are marked *

error: Content is protected !!