• September 8, 2024

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಲಾಯಿಲ ಗ್ರಾ.ಪಂ ಗೆ ಕಸದ ಬುಟ್ಟಿ ವಿತರಣೆ

 ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಲಾಯಿಲ ಗ್ರಾ.ಪಂ ಗೆ ಕಸದ ಬುಟ್ಟಿ ವಿತರಣೆ

ಲಾಯಿಲ: ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜುಲೈ.21 ರಂದು ಲಾಯಿಲ ಗ್ರಾ.ಪಂ ನಲ್ಲಿ ಸುಮಾರು 10 ಕಸದ ಬುಟ್ಟಿಗಳನ್ನು ವಿತರಿಸುವ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ವಹಿಸಿದ್ದರು.

ಈ ಸಂದರ್ಭದಲ್ಲಿ ಲಾಯಿಲ ಗ್ರಾ.ಪಂ ಅಧ್ಯಕ್ಷೆ ಆಶಾ ಬೆನಡಿಕ್ಟ್ ಅವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಶಂಕರ್ ರಾವ್ ಕಸದ ಬುಟ್ಟಿಗಳನ್ನು ಹಸ್ತಾಂತರಿಸಿದರು.

ಈ ವೇಳೆ ಲಾಯಿಲ ಗ್ರಾ.ಪಂ ಲೆಕ್ಕಪರಿಶೋಧಕಿ ಸುಪ್ರಿತಾ ಶೆಟ್ಟಿ, ಘಟಕದ ಕಮ್ಯೂನಿಟಿ ಡೆವಲಪ್ಮೆಂಟ್ ಉಪಾಧ್ಯಕ್ಷೆ ಆಶಾಲತಾ ಪ್ರಶಾಂತ್ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!