• July 27, 2024

ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಟಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಬಿಜೆಪಿ ಆಗ್ರಹ

 ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಟಿ:   ಸೌಜನ್ಯ ಪ್ರಕರಣದ ಮರು ತನಿಖೆಗೆ ಬಿಜೆಪಿ   ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆದ ಸುದ್ದಿಗೋಷ್ಟಿ ಯಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ಪ್ರಮುಖರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಸ್ಡಿಎಂ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಪೊಲೀಸ್ ತನಿಖೆ ಆಗಿದೆ.ಸಿಐಡಿ ಬಳಿಕ ಹೋರಾಟ ನಡೆದು ಸಿಬಿಐ ತನಿಖೆ ಕೂಡ ಆಗಿದೆ ಕೊನೆಗೆ ಸಿಬಿಐ ಬಂಧಿತ ವ್ಯಕ್ತಿ ಆರೋಪಿ ಅಲ್ಲ ಅಂತ ಹೇಳಿದೆ. ಆವತ್ತು ಕೂಡ ಬಿಜೆಪಿ ಈ ವಿಚಾರದಲ್ಲಿ ಹೋರಾಟ ಮಾಡಿತ್ತು ಇದೀಗ ಮತ್ತೆ ಬಿಜೆಪಿ ಇಡೀ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತದೆ. ಘಟನೆಯ ಬಳಿಕದ ಹೋರಾಟಗಳು, ಕುಟುಂಬದ ಆಗ್ರಹಗಳ ತನಿಖೆ ಆಗಬೇಕು.ಹಂತಕರ ಪತ್ತೆ ಮೂಲಕ ಕುಟುಂಬಕ್ಕೆ ನ್ಯಾಯ ಸಿಗಬೇಕು. ಬಿಜೆಪಿ ಪ್ರಕರಣದ ಮರು ತನಿಖೆಗೆ ಸಿಎಂಗೆ ಒತ್ತಾಯ ಮಾಡಲಿದೆ. ಅ. 27ರಂದು ಬಿಜೆಪಿ ಬೃಹತ್ ಹೋರಾಟ ನಡೆಸಿದರು. ಆ ಬಳಿಕ ಸಿಎಂ ಮತ್ತು ರಾಜ್ಯಪಾಲರಿಗೆ ಮನವಿ ಕೊಡಲಿದ್ದೇವೆ. ಅ.27 ರಂದು ದ.ಕ ಮತ್ತು ಉಡುಪಿ ಜಿಲ್ಲೆಯ ಕಾರ್ಯಕರ್ತರ ಸೇರಿಸಿ ಬೃಹತ್ ಹೋರಾಟ ನಡೆಸಲಿದ್ದೇವೆ.ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೃಹತ್ ಹೋರಾಟ ನಡೆಯಲಿದೆ. ಎರಡೂ ಜಿಲ್ಲೆಗಳ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ. ಪ್ರತಿಭಟನೆಯ ಮರು ದಿನ ಶಾಸಕರ ನಿಯೋಗ ಸಿಎಂ ಭೇಟಿಯಾಗಲಿದೆ.

ಸೌಜನ್ಯ ಕೇಸ್ ನಲ್ಲಿ ಸಿಬಿಐಗೆ ಹೋದರೂ ಆರೋಪಿಗಳು ಯಾರು ಅನ್ನೋದು ಆಗಿಲ್ಲ. ಇದರಲ್ಲಿ ಯಾರನ್ನೂ ಟಾರ್ಗೆಟ್ ಮಾಡುವ ವಿಷಯ ಇಲ್ಲ.ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಉದ್ದೇಶ.ಬೇರೆ ಬೇರೆ ರೀತಿಯ ಹೋರಾಟಗಾರರು ಬೇರೆ ಹೋರಾಟ ಮಾಡಬಹುದು ಎಂದು ಹೇಳಿದರು.

Related post

Leave a Reply

Your email address will not be published. Required fields are marked *

error: Content is protected !!