ಹುಣ್ಸೆಕಟ್ಟೆ: ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ 23 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಹಸ್ತಾಂತರ
![ಹುಣ್ಸೆಕಟ್ಟೆ: ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ 23 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಹಸ್ತಾಂತರ](https://namanachannel.in/wp-content/uploads/2023/08/IMG_20230827_164315-850x508.jpg)
ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ(ರಿ) ವತಿಯಿಂದ ಸೆ.19, 20, 21 ರಂದು ಸಮುದಾಯ ಭವನ ಹುಣ್ಸೆಕಟ್ಟೆಯಲ್ಲಿ ಜರುಗುವ 23 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.27 ರಂದು ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿಯ ಆಡಳಿತ ಸಮಿತಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮಹಿಳಾ ಸಮಿತಿಯ ಪದಾಧಿಕಾತಿಗಳು ಹಾಗೂ ಮೊದಲಾದವರು ಭಾಗಿಯಾಗಿದ್ದರು.