• September 8, 2024

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮ

 ಗುರುವಾಯನಕೆರೆ:     ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮವು ಜ.24 ರಂದು ನಡೆಯಿತು.


ಹೊರನಾಡು ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊತ್ತೇಸರರಾದ ಭೀಮೇಶ್ವರ ಜೋಶಿ ಶಿಲಾನ್ಯಾಸವನ್ನು ನೆರವೇರಿಸಿ ಶುದ್ಧ ಮನಸ್ಸಿನ ಪ್ರಾರ್ಥನೆಯಿಂದ ದೈವ- ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.


ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಲಕ್ಷ್ಮೀ ಗ್ರೂಪ್ ಸಂಸ್ಥೆಯ ಮಾಲಕ ಮೋಹನ್ ಕುಮಾ‌ರ್, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸಮಂತ್ ಕುಮಾ‌ರ್ ಜೈನ್, ಬದ್ಯಾರ್‌ ಪಂಚಮುಖಿ ಇಂಡಸ್ಟ್ರೀಸ್ ಮಾಲಕ ಬಾಲಕೃಷ್ಣಶೆಟ್ಟಿ, ಜೀರ್ಣೋದ್ಧಾರ ಹಾಗೂ ಪುನ‌ರ್ ಪ್ರತಿಷ್ಠಾ ಸಮಿತಿ ಅಧ್ಯಕ್ಷ ಸಂಪತ್ ಬಿ ಸುವರ್ಣ, ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಟ್ರಸ್ಟಿ ಪಿ ರಾಜೇಂದ್ರ ನಾಯ‌ರ್, ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊತ್ತೇಸರ ಸುಕೇಶ್ ಕುಮಾರ್ ಜೈನ್ ,ಪ್ರವೀಣ್‌ ಕುಮಾ‌ರ್ ಅಜಿ ಪಾಡ್ಯಾರುಬೀಡು, ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷ ವಿಶ್ವೇಶ್ ಕಿಣಿ ಉಪಸ್ಥಿತರಿದ್ದರು.

ಪುರೋಹಿತ್ ವಾಸುದೇವ ಭಟ್ ಪ್ರಾರ್ಥಿಸಿದರು. ಆನಂದ ಕೋಟ್ಯಾನ್ ಸ್ವಾಗತಿಸಿದರು. ವಸಂತ ಪೂಜಾರಿ ಗರ್ಡಾಡಿ ನಿರೂಪಿಸಿದರು.

Related post

Leave a Reply

Your email address will not be published. Required fields are marked *

error: Content is protected !!