• July 27, 2024

ಫೆ.17 ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪಕ್ಷದ ಪ್ರಮುಖರು ಭಾಗಿ

 ಫೆ.17 ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪಕ್ಷದ ಪ್ರಮುಖರು ಭಾಗಿ

ಫೆ.17 ರಂದು ಮಂಗಳೂರಿನ ಅಡ್ಯಾರು ಸಹ್ಯಾದ್ರಿ ವಠಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಹಾಗೂ ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಬಗ್ಗೆ ಮಾತನಾಡಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ 10,000 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ವೇಣೂರಿನಲ್ಲಿ ಫೆ.21 ರಿಂದ ಮಾರ್ಚ್ 1 ರ ತನಕ ನಡೆಯಲಿರುವ ಶ್ರೀ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಪೂರಕವಾಗಿ ಸರ್ಕಾರವು ತಾಲೂಕಿಗೆ ರಸ್ತೆ ಮತ್ತು ಇನ್ನಿತರ ಅಭಿವೃದ್ಧಿ ಯೋಜನೆಯಡಿ ಅನುದಾನಗಳು ಮಂಜೂರಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ನಾಗೇಶ್ ಕುಮಾರ್, ಧರ್ನೇಂದ್ರ ಕುಮಾರ್, ನಮಿತಾ, ಬೊಮ್ಮನ ಗೌಡ, ಇಸ್ಮಾಯಿಲ್ ಬೆರಿಂಕೆ ಉಪಸ್ಥಿತರಿದ್ದರು

Related post

Leave a Reply

Your email address will not be published. Required fields are marked *

error: Content is protected !!