• September 8, 2024

ಮಕ್ಕಳ ಭಾಗ್ಯವಿಲ್ಲದೆ ಕೊರಗಿದ ದಂಪತಿಗಳ ಮಡಿಲಿಗೆ ಕಂದಮ್ಮನನ್ನು ಕರುಣಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿ

 ಮಕ್ಕಳ ಭಾಗ್ಯವಿಲ್ಲದೆ ಕೊರಗಿದ ದಂಪತಿಗಳ ಮಡಿಲಿಗೆ ಕಂದಮ್ಮನನ್ನು ಕರುಣಿಸಿದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ತಾಯಿ

ಕಾರ್ಕಳ ತಾಲೂಕಿನ ಕೇರ್ವಸೆ ಪರಿಸರದ ಸುರೇಶ್ ಮತ್ತು ಗೀತಾ ಎಂಬುವವರು ಸುಮಾರು 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಅವರ ದಾಂಪತ್ಯ ಜೀವನದಲ್ಲಿ ಮಕ್ಕಳ ಭಾಗ್ಯ ಒದಗಿ ಬರಲಿಲ್ಲ. ಎಲ್ಲಾ ಪ್ರಯತ್ನ ಮಾಡಿದರೂ ಜಯ ಸಿಗಲಿಲ್ಲ. ಆ ಸಮಯದಲ್ಲಿ ಪವಿತ್ರ ಕ್ಷೇತ್ರವಾದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಬಂದು, ದೇವಿ ಚಾಮುಂಡೇಶ್ವರಿ ಅಮ್ಮನವರ “ಅಭಯ ನುಡಿ “ಯಲ್ಲಿ ವಿಚಾರಣೆ ಮಾಡಿದ್ದಾರೆ.

ಆ ಸಮಯದಲ್ಲಿ ಸಮಸ್ಯೆಯನ್ನು ಪರಿಹಾರ ಮಾಡಿ ನಿಮ್ಮ ದಾಂಪತ್ಯ ಜೀವನದಲ್ಲಿ ಒಂದು ವರ್ಷದ ಒಳಗಡೆ ಮಕ್ಕಳ ಭಾಗ್ಯ ಒದಗಿ ಬರುತ್ತದೆ ಎಂದು ಅಭಯ ಕೊಟ್ಟಳು.

ಕೊಟ್ಟ ಮಾತಿನ ಪ್ರಕಾರವಾಗಿ ಅವರ ದಾಂಪತ್ಯದಲ್ಲಿ ಮಕ್ಕಳ ಭಾಗ್ಯ ಒದಗಿ ಬಂತು. ಅವರ ಜೀವನದ ಕತ್ತಲೆಯನ್ನು ದೂರ ಮಾಡಿದ ಶ್ರೀದೇವಿ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿದರು.

Related post

Leave a Reply

Your email address will not be published. Required fields are marked *

error: Content is protected !!