• September 8, 2024

ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು ಹಾಗೂ ನೂತನ‌ ಕ್ಯಾಂಪಸ್‌ ಅನ್ನು ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

 ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು  ಹಾಗೂ ನೂತನ‌ ಕ್ಯಾಂಪಸ್‌ ಅನ್ನು  ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಧಾರವಾಡ: ಧಾರವಾಡದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು (ಐಐಐಟಿ) ಹಾಗೂ ನೂತನ‌ ಕ್ಯಾಂಪಸ್‌ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು.

ಸಂಸ್ಥೆಯ ಅಧ್ಯಕ್ಷೆ ಹಾಗೂ ಇನ್ಪೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ರಾಷ್ಟಪತಿ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು.

ಐಐಐಟಿ ಉದ್ಘಾಟನೆ ಮಾಡಿದ ರಾಷ್ಟ್ರಪತಿ ಮುರ್ಮು ಅವರಿಗೆ ಸುಧಾ ಮೂರ್ತಿಯವರು ಮೂರು ಸಾವಿರ ಹೊಲಿಗೆ ಹಾಕಿದ ರಾಯಚೂರು ಬಳಿ ಇರುವ ದೇವದಾಸಿಯರು ಹೊಲಿದಿದ್ದ ಕೌದಿ, ರೇಷ್ಮೆ ಸೀರೆ ಜೊತೆ 3 ಹಜಾರ್ ಟಾಕೆ ಪುಸ್ತಕ ಕೊಟ್ಟು ಗೌರವಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!