ಬೈಂದೂರು: ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ ಹೊಡೆದ ಆಂಬುಲೆನ್ಸ್:ಮೂರು ಮಂದಿ ಸಾವು
![ಬೈಂದೂರು: ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ ಹೊಡೆದ ಆಂಬುಲೆನ್ಸ್:ಮೂರು ಮಂದಿ ಸಾವು](https://namanachannel.in/wp-content/uploads/2022/07/IMG_20220720_234725.jpg)
ಬೈಂದೂರು: ಬೈಂದೂರು ತಾಲೂಕು ವ್ಯಾಪ್ತಿಯ ಶಿರೂರಿನಲ್ಲಿ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಟೋಲ್ ಗೇಟ್ ಕಂಬಕ್ಕೆ ಡಿಕ್ಕಿಯಾದ ಪ್ರಕರಣದಲ್ಲಿ ಮೂವರು ಚಿಕಿತ್ಸೆ ಫಲಿತ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟರು ಮಹಿಳೆ, ಇಬ್ಬರು ಪುರುಷರು ಸೇರಿದ್ದಾರೆ .ಆಂಬುಲೆನ್ಸ್ ನಲ್ಲಿ ಇದ್ದ ರೋಗಿ, ರೋಗಿ ಪತ್ನಿ ಮತ್ತು ಸಂಬಂಧಿ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ನಲ್ಲಿ ಈ ದುರಂತ ಇಂದು ಸಂಭವಿಸಿತ್ತು.