ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಸಂಘೋತ್ಸವ- 2022 ವಿನೂತನ ಕಾರ್ಯಕ್ರಮ
![ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಸಂಘೋತ್ಸವ- 2022 ವಿನೂತನ ಕಾರ್ಯಕ್ರಮ](https://namanachannel.in/wp-content/uploads/2022/11/IMG_20221103_185238-850x560.jpg)
![](https://namanachannel.in/wp-content/uploads/2022/11/IMG_20221103_185313-1024x550.jpg)
ತೋಟತ್ತಾಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಹಾಗೂ ಚೈತನ್ಯ ಮಹಾಸಂಘ ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳಾ ಸಂಘಗಳ ಬಲವರ್ಧನೆಯ ನಿಟ್ಟಿನಲ್ಲಿ ಸಂಘೋತ್ಸವ- 2022 ಎಂಬ ವಿನೂತನ ಕಾರ್ಯಕ್ರಮವನ್ನು ನ.3 ರಂದು ತೋಟತ್ತಾಡಿ ಸಂತ ಅಂತೋನಿ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಯಿತು.
ತೋಟತ್ತಾಡಿ ಸಂತ ಅಂತೋನಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಜೋಸ್ ಪೂವತ್ತಿಂಗಲ್ ರವರು ದೀಪ ಬೆಳಗಿಸಿ ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘೋತ್ಸವ ಆಯೋಜನೆ ಮಾಡಿದ ಉದ್ದೇಶದ ಬಗ್ಗೆ ವಿವರಿಸಿದರು.
ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀಮತಿ ಏಲಿಯಮ್ಮ ತೋಮಸ್ ಉಪಸ್ಥಿತರಿದ್ದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಅಪರಾಹ್ನದ ನಂತರ ವಿವಿಧ ಹೊರಾಂಗಣ ಕ್ರೀಡೆಗಳನ್ನು ಆಯೋಜಿಸಿಲಾಯಿತು.
![](https://namanachannel.in/wp-content/uploads/2022/11/IMG_20221103_185336-1024x768.jpg)
ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಯಿತು. ಸಂತ ತೋಮಸ್ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಮ್ಯಾಥ್ಯೂ ವೆಟ್ಟಂತ್ತಡತ್ತಿಲ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸ್ಥಳೀಯ ನಿರ್ದೇಶಕರುಗಳು, ಸ್ಥಳೀಯ ಕಾನ್ವೆಂಟಿನ ಧರ್ಮ ಭಗಿನಿಯರು, ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿ ವರ್ಗ, ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿದ್ಯಾರ್ಥಿನಿ ಕುಮಾರಿ ಪ್ರಕೃತಿ ಸಿ.ವಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿನ ಸಮಾಜ ಕಾರ್ಯ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ದುಡಿದು ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.