• July 27, 2024

ಬೆಳ್ತಂಗಡಿ: 4ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ: ಇಬ್ಬರ ಮೇಲೆ ಹಲ್ಲೆ: ಓರ್ವ ಸಾವು

 ಬೆಳ್ತಂಗಡಿ: 4ವರ್ಷದ ಬಾಲಕಿಯ  ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ: ಇಬ್ಬರ ಮೇಲೆ ಹಲ್ಲೆ: ಓರ್ವ ಸಾವು

ಇಂದಬೆಟ್ಟು: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ ಮಾಡಿದ್ದು ಗಂಭೀರ ಗಾಯ ಗೊಂಡು ಆಸ್ಪತ್ರೆ ಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಜು.22 ರಂದು ಸಂಜೆ ವೇಳೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದಲ್ಲಿ ನಾರಾಯಣ ನಾಯ್ಕ ಎಂಬವರು ಬೀಡಿ ಕೊಟ್ಟು ವಾಪಾಸು ಬರುತ್ತಿರುವಾಗ ಶಾಂತಿನಗರ ಆಟದ ಮೈದಾನದಲ್ಲಿ ಯುವಕರಗುಂಪೊಂದು ಅಡ್ಡಗಟ್ಟಿ ನಾಲ್ಕು ವರ್ಷದ ಬಾಲಕಿಯನ್ನು ನೀನು ಅತ್ಯಾಚಾರ ಮಾಡಿದ್ದೀಯಾ ಎಂದು ಹೇಳಿ ಮಾರಣಾಂತಿಕ ಹಲ್ಲೆ ಮಾಡುತ್ತಿದ್ದ ವೇಳೆ ಇದನ್ನು ನೋಡಿದ ನಾರಾಯಣ ನಾಯ್ಕ ಅವರ ಹೆಂಡತಿಯ ಅಕ್ಕನ ಗಂಡ ಜಾರಪ್ಪ ನಾಯ್ಕ್ ಹಲ್ಲೆಯನ್ನು ತಪ್ಪಿಸಲು ಪ್ರಯತ್ನಿಸಿದಾಗ ಅವರಿಗೂ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಗಂಭೀರ ಗಾಯಗೊಂಡಿದ್ದ ಜಾರಪ್ಪ ನಾಯ್ಕ್ ಮತ್ತು ನಾರಾಯಣ ನಾಯ್ಕ್ ಇಬ್ಬರು ಅಸ್ವಸ್ಥರಾಗಿ ಬಿದ್ದಿದ್ದರು ಈ ಬಗ್ಗೆ ಸ್ಥಳೀಯರು ಮನೆಯವರಿಗೆ ಮಾಹಿತಿ ನೀಡಿದಾಗ ಜಾರಪ್ಪ ಅವರ ಮಗ ರಾಜಶೇಖರ್ ಬಂದು ವಾಹನದಲ್ಲಿ ಆಸ್ಪತ್ರೆಗೆ ಕರೆತರುವ ವೇಳೆ ಜಾರಪ್ಪ ನಾಯ್ಕ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ನಂತರ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ನಾರಾಯಣ ನಾಯ್ಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆ ಮಾಡಿದ ಆರೋಪಿಗಳ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಜಾರಪ್ಪ ನಾಯ್ಕ್ ಅವರ ಮಗ ರಾಜಶೇಖರ್ ದೂರು ನೀಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!