• October 18, 2024

ಗುರುವಾಯನಕೆರೆ: ಆಟೋ ಚಾಲಕ, ಕೊಂಟುಪಳಿಕೆ ಶಿವಾಜಿನಗರ ನಿವಾಸಿ ಪ್ರವೀಣ್ ಪಿಂಟೋ ರವರ ಶವ ಪತ್ತೆ

 ಗುರುವಾಯನಕೆರೆ: ಆಟೋ ಚಾಲಕ, ಕೊಂಟುಪಳಿಕೆ ಶಿವಾಜಿನಗರ ನಿವಾಸಿ ಪ್ರವೀಣ್ ಪಿಂಟೋ ರವರ ಶವ ಪತ್ತೆ

 

ಗುರುವಾಯನಕೆರೆ: ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕೊಂಟುಪಳಿಕೆ ಶಿವಾಜಿನಗರ ನಿವಾಸಿ , ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಶವ ಗುರುವಾಯನಕೆರೆ ಕೆರೆಯಲ್ಲಿ ಪತ್ತೆಯಾಗಿದೆ.

ಇಂದು ಬೆಳಗ್ಗೆ ತನ್ನ ಮಾಲಕರೊಂದಿಗೆ ಫೋನ್ ಕರೆಯ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದರು. ಆ ಹಿನ್ನೆಲೆ ಧರ್ಮಸ್ಥಳ ಶೌರ್ಯ ವಿಪತ್ತು ತಂಡ ಹಾಗೂ ಅಗ್ನಿ ಶಾಮಕ ದಳ ನಿರಂತರ ಹುಡುಕಾಟ ನಡೆಸಿದ್ದಾರೆ. ಶವ ಪತ್ತೆಯಾಗದೇ ಇದ್ದಾಗ ಕೆರೆಗೆ ಹಾರಿದ್ದಾರೆ ಎಂಬುದನ್ನು ಶಂಕಿಸಲಾಗಿತ್ತು. ಆದರೂ ನಿರಂತರ ಹುಡುಕಾಟದಿಂದ ಇದೀಗ ಶವ ಕೆರೆಯಲ್ಲಿ ಪತ್ತೆಯಾಗಿದೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ.

ಸಾವಿಗೆ ಕಾರಣ ಏನು ಎಂಬುದು ಇನ್ನಷ್ಟೆ ಮಾಹಿತಿ ಲಭ್ಯವಾಗಬೇಕಾಗಿದೆ.

Related post

Leave a Reply

Your email address will not be published. Required fields are marked *

error: Content is protected !!