• September 8, 2024

ಇಂದಬೆಟ್ಟು: ತೋಟದಲ್ಲಿ ಕೆಲಸಮಾಡುತ್ತಿದ್ದ ವೇಳೆ ವೃದ್ದರೋರ್ವರ ತಲೆಗೆ ಆಕಸ್ಮಿಕವಾಗಿ ಬಿದ್ದ ಅಡಿಕೆ ಮರ: ಚಿಕಿತ್ಸೆ ಫಲಕಾರಿಯಾಗದೆ ಸಾವು

 ಇಂದಬೆಟ್ಟು: ತೋಟದಲ್ಲಿ ಕೆಲಸಮಾಡುತ್ತಿದ್ದ ವೇಳೆ ವೃದ್ದರೋರ್ವರ ತಲೆಗೆ ಆಕಸ್ಮಿಕವಾಗಿ ಬಿದ್ದ ಅಡಿಕೆ ಮರ: ಚಿಕಿತ್ಸೆ ಫಲಕಾರಿಯಾಗದೆ ಸಾವು

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ‌ ಅಂಕೊತ್ಯಾರು ನಿವಾಸಿ ನವೀನ್ ಎಂಬವರ ಮನೆಯ ತೋಟದಲ್ಲಿ ಅಡಿಕೆ ಮರ ಕಡೆಯುತ್ತಿರುವಾಗ ಆಕಸ್ಮಿಕವಾಗಿ ವೃದ್ದರೋರ್ವರ ತಲೆ ಮೇಲೆ ಬಿದ್ದು ಸಾವನ್ಬಪ್ಪಿದ ಘಟನೆ ನ.30 ರಂದು ನಡೆದಿದೆ.

ಸಾವನ್ನಪ್ಪಿದ ವೃದ್ದ ಮುಂಡಾಜೆ ಗ್ರಾಮದ ಮಂಜುಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು (66) ಮೃತಪಟ್ಟ ದುರ್ದೈವಿ.

ತಲೆ ಮೇಲೆ ಅಡಿಕೆ ಮರ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಅಣ್ಣು ಅವರನ್ನು ತಕ್ಷಣ ಕೆಲಸಗಾರರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಅಣ್ಣ ಅವರ ಪುತ್ರ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!