• September 8, 2024

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ “ರಂಗುರಂಗಿತ” ವಾಣಿ ಸಾಂಸ್ಕೃತಿಕ ಉತ್ಸವ

 ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ “ರಂಗುರಂಗಿತ” ವಾಣಿ ಸಾಂಸ್ಕೃತಿಕ ಉತ್ಸವ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪ್ರಸ್ತುತ ಪಡಿಸುವ “ರಂಗುರಂಗಿತ” ವಾಣಿ ಸಾಂಸ್ಕೃತಿಕ ಉತ್ಸವವು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಡಿ.10 ರಂದು ಜರುಗಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಕುಶಾಲಪ್ಪ ಗೌಡ ವಹಿಸಿದ್ದರು.

ಮುಖ್ಯಅತಿಥಿಗಳಾಗಿ ಪುತ್ತೂರು ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷರು, ನ್ಯಾಯಾವಾದಿ ಮೋಹನ್ ಗೌಡ ಇದ್ಯಡ್ಕ, ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಎಚ್ ಪದ್ಮಗೌಡ ಆಗಮಿಸಿದ್ದರು. ವೇದಿಕೆಯಲ್ಲಿ ನ.ಪಂ ಉಪಾಧ್ಯಕ್ಷ ಜಯಾನಂದ ಗೌಡ, ಹೈದರಾಬಾದ್ ನೋವಾಟಿನ್ ಕಂಪೆನಿಯ ಕು|ಚಿನ್ಮಯಿ ವಿ ಭಟ್, ನ್ಯಾಯಾವಾದಿ ಸತೀಶ್ ರೈ ಬಾರ್ದಡ್ಕ, ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಕುರೆಲ್ಯ ಉಪಸ್ಥಿತರಿದ್ದರು.

ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಿ ಯದುಪತಿ ಗೌಡ, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ್, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ, ದಿನೇಶ್ ಗೌಡ, ಪ್ರಸಾದ್ ಕುಲಾಲ್ ಹಾಗೂ ಉಪನ್ಯಾಸಕ ವೃಂದ, ಶಿಕ್ಷಕ ವೃಂದ ಭಾಗಿಯಾಗಿದ್ದರು.

ವಿದ್ಯಾರ್ಥಿಗಳಾದ ತೃಪ್ತಿ ಮತ್ತು ಬಳಗ ಪ್ರಾರ್ಥನೆ ಮಾಡಿದರು.

Related post

Leave a Reply

Your email address will not be published. Required fields are marked *

error: Content is protected !!