• September 8, 2024

ದೇವಸ್ಥಾನಗಳ ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಮಾಡಬಾರದು, ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯ: ಪತ್ರಿಕಾಗೋಷ್ಠಿ

 ದೇವಸ್ಥಾನಗಳ ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಮಾಡಬಾರದು, ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯ: ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಕರಿಮಣೇಲು ಗ್ರಾಮದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ನಡೆಯುತ್ತಿದ್ದು, ದೇವಸ್ಥಾನದ ಅಂಗಣಕ್ಕೆ ಇಂಟರ್‌ಲಾಕ್ ಅಳವಡಿಕೆ ಮಾಡುವ ಬಗ್ಗೆ ನಾವು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಕಾರ್ಯದರ್ಶಿಯವರು ರಕ್ಷಿತ್ ಶಿವರಾಮ್ ಅವರ ಮನೆಗೆ ಹೋಗಿ ಕೇಳಿಕೊಂಡ ಅನುಮತಿ ಮೇರೆಗೆ ಅವರು ಒಪ್ಪಿಕೊಂಡಿದ್ದರು. ಅಲ್ಲದೆ ವೇಣೂರಿನ ಕಾರ್ಯಕ್ರಮವೊಂದಕ್ಕೆ ಬಂದಿದ್ದ ಅವರು ದೇವಸ್ಥಾನಕ್ಕೆ ಭೇಟಿ ನೀಡಿ, ಆ ಸಂದರ್ಭ ಇಂಟರ್‌ಲಾಕ್‌ಗೆ ವ್ಯವಸ್ಥೆ ಮಾಡಿರುವುದನ್ನು ತಿಳಿಸಿದ್ದರು. ಆದರೆ ಶಾಸಕರು ತಾನು ಇಂಟರ್‌ಲಾಕ್ ಹಾಕುವ ವ್ಯವಸ್ಥೆ ಮಾಡುವುದಾಗಿ ಹೇಳಿದ್ದು, ಇದರಿಂದ ನಮಗೆ ಬಹಳಷ್ಟು ಬೇಸರವಾಗಿದೆ. ಮತ್ತೆ ರಕ್ಷಿತ್ ಅವರಿಗೆ ವಿಷಯ ತಿಳಿಸಿದಾಗ ಅವರು ಪರವಾಗಿಲ್ಲ, ಬೇರೆ ಕಾರ್ಯಕ್ರಮಕ್ಕೆ ಸಹಕಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ದೇವಸ್ಥಾನಗಳ ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಮಾಡಬಾರದು, ಅವರನ್ನು ಕರೆಯಬಾರದು ಎಂದು ತಾಕೀತು ಮಾಡುವುದು ಸರಿಯಲ್ಲ, ಎಲ್ಲಾ ಭಕ್ತರಿಗೂ ಅಭಿವೃದ್ಧಿಯಲ್ಲಿ ಅವಕಾಶ ನೀಡಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆ ವೇಣೂರಿನ ಅಧ್ಯಕ್ಷ ಜಯರಾಮ ಶೆಟ್ಟಿ ಹೇಳಿದರು.

ಅವರು ಡಿ.14ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ಹಟ್ಟಾಜೆಯವರು ಮಾತನಾಡಿ, ದೇವಸ್ಥಾನಗಳಲ್ಲಿ ಜಾತಿ ಮತ್ತು ರಾಜಿಕೀಯ ಇರಬಾರದು. ಮನಸ್ಸು ಶುದ್ಧವಾಗಿರಬೇಕು, ದೇವಸ್ಥಾನದ ಅಭಿವೃದ್ಧಿಗೆ ದಾನಿಗಳು ನೀಡುವ ಕೊಡುಗೆಯನ್ನು ಬೇಡ ಎಂದು ಹೇಳುವುದು ಸರಿಯಲ್ಲ, ಯಾರನ್ನೂ ದ್ವೇಷಿಸುವ ಕಾರ್ಯಕ್ರಮವಾಗಬಾರದು ಎಂದು ಸಲಹೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ದೇಜಪ್ಪ ಶೆಟ್ಟಿ, ಸತೀಶ್ ಹೆಗ್ಡೆ, ಕೋಶಾಧಿಕಾರಿ ಗಣೇಶ್ ಪೂಜಾರಿ, ಸದಸ್ಯರಾದ ಅರವಿಂದ ಶೆಟ್ಟಿ ಖಂಡಿಗ, ದಯಾನಂದ ದೇವಾಡಿಗ ಉಪಸ್ಥಿತರಿದ್ದರು

Related post

Leave a Reply

Your email address will not be published. Required fields are marked *

error: Content is protected !!