• September 8, 2024

ಬೆಳ್ಳಾರೆ: ಬಿಜೆಪಿ ಯುವ ನಾಯಕನ ಬರ್ಬರ ಹತ್ಯೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

 ಬೆಳ್ಳಾರೆ: ಬಿಜೆಪಿ ಯುವ ನಾಯಕನ ಬರ್ಬರ ಹತ್ಯೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಳ್ಳಾರೆ: ಬಿಜೆಪಿ ಯುವ ನಾಯಕ ಪ್ರವೀಣ್ ಮೇಲೆ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ರ್ರದಿಂದ ದಾಳಿ ನಡೆಸಿ ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದಾರೆ.

ಗಂಭೀರ ಗಾಯಗೊಂಡ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಪ್ರಾಣಪಕ್ಷಿ ಹಾರಿಹೊಗಿದೆ. ಪುತ್ತೂರು ಖಾಸಗಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ.

ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಪ್ರವೀಣ್ ಬೆಳ್ಳಾರೆಯಲ್ಲಿ ಕೋಳಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಯಾರೋ ಕಿಡಿಗೇಡಿಗಳು ಬೈಕ್ ನಲ್ಲಿ ಬಂದು ಕೋಳಿ ಅಂಗಡಿಯ ಮುಂಭಾದಲ್ಲಿ ಈ ಕೃತ್ಯವನ್ನು ಎಸಗಿದ್ದಾರೆ.

ಕೊಲೆಯಾದ ಬೆನ್ನಲ್ಲೆ ಪುತ್ತೂರಿನಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಈತನ ಮೇಲೆ ಯಾರು ಯಾಕೆ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related post

Leave a Reply

Your email address will not be published. Required fields are marked *

error: Content is protected !!