• July 27, 2024

ಬೆಳ್ತಂಗಡಿ: ಅಂಬೇಡ್ಕರ್ ವಾದಿ ಪಿ ಡೀಕಯ್ಯ ಸಾವಿನ ಪ್ರಕರಣ: ತನಿಖೆಗೆ ಇಳಿದ ಸಿಐಡಿ ತಂಡ

 ಬೆಳ್ತಂಗಡಿ: ಅಂಬೇಡ್ಕರ್ ವಾದಿ  ಪಿ ಡೀಕಯ್ಯ ಸಾವಿನ ಪ್ರಕರಣ: ತನಿಖೆಗೆ ಇಳಿದ ಸಿಐಡಿ ತಂಡ

ಬೆಳ್ತಂಗಡಿ: ಹಿರಿಯ ದಲಿತ ನಾಯಕ, ಅಂಬೇಡ್ಕರ್ ವಾದಿ ಪಿ ಡೀಕಯ್ಯ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ತಹಶೀಲ್ದಾರ್ ನೇತೃತ್ವದಲ್ಲಿ ಶವವನ್ನು ಹೊರತೆಗೆದು, ವೈದ್ಯರ ತಂಡ ಶವ ಪರೀಕ್ಷೆ ನಡೆಸಿದ್ದರು. ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿದ ಮನೆಯವರ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಹಲವರನ್ನು ತನಿಖೆಗೆ ಒಳಪಡಿಸಿದ್ದರು.

ಈ ಮಧ್ಯೆ ಡೀಕಯ್ಯ ಅವರ ಕುಟುಂಬಸ್ಥರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಪ್ರಕರಣದ ಬಗ್ಗೆ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ಸಿಐಡಿ ತನಿಖೆಗೆ ಒತ್ತಾಯಿಸಿದ್ದರು. ಡಿಸೆಂಬರ್ 22ರಂದು ಬೆಳಗ್ಗೆ ಬೆಂಗಳೂರಿನಿಂದ ಸಿಐಡಿ ಇನ್ಸ್ಪೆಕ್ಟರ್ ಶಿವರಾಜ್ ತಂಡದ ಮೂವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿ ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಅವರಿಂದ ಮಾಹಿತಿ ಪಡೆದು ತನಿಕೆಗೆ ಇಳಿದಿದೆ

Related post

Leave a Reply

Your email address will not be published. Required fields are marked *

error: Content is protected !!