• September 8, 2024

ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಬೈಕ್ ನಾಪತ್ತೆ: ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕದೀಮರ ಹಾವಳಿ

 ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ನಿಲ್ಲಿಸಿದ್ದ ಬೈಕ್ ನಾಪತ್ತೆ: ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕದೀಮರ ಹಾವಳಿ

ಬೆಳ್ತಂಗಡಿ: ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಬೈಕ್ ಕದೀಮರ ಹಾವಳಿ ಹೆಚ್ಚಾಗಿದೆ. ಕಳೆದ ಕೆಲವು ತಿಂಗಳ ಹಿಂದೆಯಷ್ಟೆ ಬೈಕೊಂದು ಕಳ್ಳತನವಾಗಿದ್ದು ವಾರಗಳ ನಡುವೆ ಎರಡನೇ ಬಾರಿ ಬೈಕ್ ಕಳ್ಳತನದ ವರದಿಯಾಗಿದೆ.

ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಎಸ್ ಸಿಡಿಸಿಸಿ ಬ್ಯಾಂಕ್ ಹಿಂಬದಿ ನಿಲ್ಲಿಸಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಬೈಕ್ ಅನ್ನು ಯಾರೋ ಕದೀಮರು ಕಳ್ಳತನ ಮಾಡಿರುವ ಘಟನೆ ಡಿ.22 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಾವಿನಕಟ್ಟೆ ನಿವಾಸಿ ರವಿ ಎಂಬವರು ಕಲಸಕ್ಕೆಂದು ತನ್ನ ಪಲ್ಸರ್ ಬೈಕ್ ನಲ್ಲಿ ಬರುತ್ತಿದ್ದು, ಬೈಕ್ ಅನ್ನು ಬೆಳ್ತಂಗಡಿ ಬಸ್ ನಿಲ್ದಾಣದ ಸಮೀಪ ಎಸ್ ಸಿಡಿಸಿಸಿ ಬ್ಯಾಂಕ್ ಹಿಂಬದಿ ಇಟ್ಟು ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ವಾಪಾಸು ಬರುವಷ್ಟರಲ್ಲಿ ಪಾರ್ಕ್ ಮಾಡಿದ್ದ ಬೈಕ್ ನಾಪತ್ತೆಯಾಗಿದೆ.

ಸುತ್ತಮುತ್ತ ಹುಡುಕಾಡಿದರೂ ಬೈಕ್ ಸಿಗದೇ ಇದ್ದಾಗ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ಸಿಸಿ ಕ್ಯಾಮಾದ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!