ಬೆಳ್ತಂಗಡಿ: ದ್ವಿಚಕ್ರ ವಾಹನ ಮತ್ತು ಗೂಡ್ಸ್ ವಾಹನ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಸಾವು
ಬೆಳ್ತಂಗಡಿ: ಕಾಶಿಬೆಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮತ್ತು ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಡಿ.25 ರಂದು ಸಂಜೆ ವೇಳೆ ನಡೆದಿದೆ.
ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ವಾಹನ ಉಜಿರೆಯಿಂದ ಬೆಳ್ತಂಗಡಿ ಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಚಾರ್ಮಾಡಿ ಗ್ರಾಮದ ಪುರುಷೋತ್ತಮ ಪೂಜಾರಿ(20) ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಶವವನ್ನು ಬೆಳ್ತಂಗಡಿ ಶವಾಗಾರದಲ್ಲಿ ಇಡಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ