• July 27, 2024

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಜಂಟಿ ಕಾರ್ಯದರ್ಶಿಯಾಗಿ ಧರ್ಮಸ್ಥಳದ ಜಯಕೀರ್ತಿ ಜೈನ್ ನೇಮಕ

 ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಜಂಟಿ ಕಾರ್ಯದರ್ಶಿಯಾಗಿ ಧರ್ಮಸ್ಥಳದ  ಜಯಕೀರ್ತಿ ಜೈನ್ ನೇಮಕ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಜಂಟಿ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಧರ್ಮಸ್ಥಳದ ಜಯಕೀರ್ತಿ ಜೈನ್ ರವರನ್ನು ರಾಜ್ಯಾಧ್ಯಕ್ಷರಾದ ಷಡಕ್ಷರಿ ಯವರು ಇಂದು ನೇಮಕ ಮಾಡಿ ಆದೇಶ ನೀಡಿದರು.

ಬೆಳ್ತಂಗಡಿಯ ಪಶು ವೈದ್ಯ ಆಸ್ಪತ್ರೆಯ ಅಭಿವೃದ್ಧಿ ಅಧಿಕಾರಿಯಾಗಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ. ನಿ. ಬೆಳ್ತಂಗಡಿ ಇದರ ಅಧ್ಯಕ್ಷರಾಗಿ, ತಾಲೂಕು ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾಗಿ, ಮಹಾವೀರ ಕ್ರಿಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇದರ ನಿರ್ದೇಶಕರಾಗಿ, ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲದ ಆಡಳಿತ ಮಂಡಳಿಯ ಸಂಚಾಲಕರಾಗಿ ಹಾಗೂ ಇನ್ನಿತರ ಹಲವಾರು ಸಂಘ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!