• September 8, 2024

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಶೀಘ್ರದಲ್ಲಿ ಘೋಷಣೆಯಾಗುವ ಹಿನ್ನೆಲೆ: ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಡಿಸಿ ಸೂಚನೆ

 ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಶೀಘ್ರದಲ್ಲಿ ಘೋಷಣೆಯಾಗುವ ಹಿನ್ನೆಲೆ: ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಡಿಸಿ ಸೂಚನೆ

ಬೆಳ್ತಂಗಡಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಶೀಘ್ರದಲ್ಲಿ ಘೋಷಣೆಯಾಗುವ ಹಿನ್ನೆಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ, ಸಾರ್ವಜನಿಕ ಸಭೆ, ಸಮಾರಂಭಗಳ‌ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ಪಕ್ಷ ಮತ್ತು ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣಕೂಟ ಏರ್ಪಡಿಸುವಂತಿಲ್ಲ ಒಂದು ವೇಳೆ ಸೂಚನೆ ಮೀರಿದ್ದಲ್ಲಿ ಇತರ ಕಾಯ್ದೆಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕಾನೂನು ಸುವ್ಯವಸ್ಥೆ, ಸಾಮಾಜಿಕ ಅಶಾಂತಿ ಹಾಗೂ ಶಬ್ದಮಾಲಿನ್ಯ ಉಂಟುಮಾಡುವ ಯಾವುದೇ ಚಟುವಟಿಕೆ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಜಿಲ್ಲಾಡಳಿತಕ್ಕೆ ವರದಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!