• July 27, 2024

ಉಡುಪಿ: ಕಲ್ಮಾಡಿ ವಾರ್ಡಿನ ರಸ್ತೆ ಅಭಿವೃದ್ಧಿಗೆ ಶೀಘ್ರವೇ ಸರ್ವೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ

 ಉಡುಪಿ: ಕಲ್ಮಾಡಿ ವಾರ್ಡಿನ ರಸ್ತೆ ಅಭಿವೃದ್ಧಿಗೆ ಶೀಘ್ರವೇ ಸರ್ವೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ

ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡಿನ ಕಲ್ಮಾಡಿ ಚರ್ಚ್ ಬಳಿ ರಸ್ತೆ ಅಭಿವೃದ್ಧಿಗೆ ಉಡುಪಿ ಶಾಸಕ ರಘುಪತಿ ಭಟ್ ಇವರ ಶಿಫಾರಸ್ಸಿನ ಮೇರೆಗೆ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 4 ಲಕ್ಷ ರೂಪಾಯಿ ಮಂಜೂರಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ಖಾಸಗಿ ಜಾಗದ ಸಮಸ್ಯೆ ಉಂಟಾಗುತ್ತಿದ್ದು, ಸ್ಥಳೀಯರ ಬೇಡಿಕೆಯಂತೆ ಇಂದು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ, ಶೀಘ್ರದಲ್ಲಿ ಸರ್ವೆ ನಡೆಸಿ ಖಾಸಗಿ ಜಾಗದ ಗಡಿ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ನಗರ ಸಭೆಯ ಸದಸ್ಯರಾದ ಸುಂದರ್ ಕಲ್ಮಾಡಿ, ಶ್ರೀಷ ಕೊಡವೂರು ಹಾಗೂ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕರಾದ ಉಪೇಂದ್ರ, ಮಲ್ಪೆ ಪೋಲಿಸ್ ಉಪ ನಿರೀಕ್ಷಕರಾದ ಶಕ್ತಿವೇಲು, ಭೂ ಮಾಪನಾಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!