• September 8, 2024

ಕನ್ಯಾಡಿ:ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾರಂಭಕ್ಕೆ ಚಾಲನೆ

 ಕನ್ಯಾಡಿ:ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾರಂಭಕ್ಕೆ ಚಾಲನೆ

ಧರ್ಮಸ್ಥಳ : ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭವು ಜು.13 ರಿಂದಾ. 29ರವರೆಗೆ ಜರುಗಲಿದ್ದು, ಜು.13 ರಂದು ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಗುರು ದೇವ ಮಠದಲ್ಲಿ ಚಾಲನೆ ನೀಡಲಾಯಿತು.

ಬೆಳಿಗ್ಗೆ ಶ್ರೀ ರಾಮ ಕ್ಷೇತ್ರ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆ ಬಳಿಕ ದೇವರ ಗುಡ್ಡೆ ದೇವ ಲಿಂಗೇಶ್ವರ ದೇವಸ್ಥಾನದಿಂದ ಸ್ವಾಮೀಜಿಯ ವೈಭವ ಪುರ ಪ್ರವೇಶ ಮೆರವಣಿಗೆ, ಕಾರ್ಯಕ್ರಮದ ಉದ್ಘಾಟನೆ, ಸ್ವಾಮೀಜಿ ಯವರ ಪಾದ ಪೂಜೆ ನಡೆಯಿತು.

ಚಾತುರ್ಮಾಸ್ಯ ವೃತಾರಂಭ ಸಮಿತಿಯ ಅಧ್ಯಕ್ಷ ಶಾಸಕ ಹರೀಶ್ ಪೂಂಜಾ, ಶ್ರೀರಾಮ ಕ್ಷೆತ್ರ ಸೇವಾ ಸಮಿತಿ ಚಂಚಾಲಕ ಜಯಂತ್ ಕೋಟ್ಯಾನ್, ವಿವಿಧ ಜನಪ್ರತಿನಿದಿನಗಳು,ಶ್ರೀರಾಮ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು, ಸದಸ್ಯರು,ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಶಿಷ್ಯವರ್ಗದವರು ಭಾಗವಹಿಸಿದ್ದರು.

Related post

Leave a Reply

Your email address will not be published. Required fields are marked *

error: Content is protected !!