• July 27, 2024

ಬೆಳ್ತಂಗಡಿ: ಎ.17 ರಂದು ನಾಮಪತ್ರ ಸಲ್ಲಿಸಲಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ: ಸುದ್ದಿಗೋಷ್ಠಿ

 ಬೆಳ್ತಂಗಡಿ: ಎ.17 ರಂದು ನಾಮಪತ್ರ ಸಲ್ಲಿಸಲಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ: ಸುದ್ದಿಗೋಷ್ಠಿ

ಬೆಳ್ತಂಗಡಿ: ಚುನಾವಣಾ ಪ್ರಚಾರ ಬಿರುಸಿನತ್ತ ಸಾಗುತ್ತಿದ್ದು, ಈಗಾಗಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಎ.17 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ರವರು ತಿಳಿಸಿದರು.

ಅವರು ಎ.12 ರಂದು ಗುರುನಾರಾಯಣ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎ.12 ರಂದು ಬೆಳಿಗ್ಗೆ 10 ಗಂಟೆಗೆ ಚುನಾವಣಾ ಪ್ರಚಾರ ನಡೆಯಲಿದ್ದು, ಪ್ರಧಾನ ಭಾಷಣಕಾರರಾಗಿ ಕೆಪಿಸಿಸಿ ಮಾಧ್ಯಮ ವಕ್ತಾರರಾದ ನಿಖೇತ್ ರಾಜ್ ಮೌರ್ಯ ಭಾಗವಹಿಸಲಿದ್ದು, ಜಿಲ್ಲಾಧ್ಯಕ್ಷ , ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್, ಮಾಜಿ ಸಚಿವರಾದ ಗಂಗಾಧರ ಗೌಡ, ಕೆಪಿಸಿಸಿ ಸಂಯೋಜಕರಾದ ಶಾಹಿದ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ ಸೋಜ ಮುಂತಾದವರು ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತನಾಡಿ
ನಾವು ನೀಡುತ್ತಿರುವ ಉಚಿತ ಕರೆಂಟ್ ಅಸಾಧ್ಯವಾದ ವಿಚಾರವಲ್ಲ. ಈ ದಾಖಲೆಗಳನ್ನು ಕಾಂಗ್ರೆಸ್ ಈಗಾಗಲೆ ಮಾಡಿದೆ. ಇಂದು ಮನೆಗೆ ಬರುವಂತಹ ವಿದ್ಯುತ್ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ತಾಲೂಕಿನ ಶೇಖಡ 95% ಮನೆಗಳಿಗೆ ಉಚಿತ ವಿದ್ಯುತ್ ಕೊಡುವಂತಹ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ. ಬಿಜೆಪಿಯ ಉದ್ದೇಶ ಮಕ್ಕಳಿಗೆ ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಕು ಎಂಬುವುದು ಬಿಜೆಪಿ ಉದ್ದೇಶ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಘಟ್ಟದ ಅಧ್ಯಕ್ಷರಾದ ಶೈಲೇಶ್ ಕುಮಾರ್, ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರು ಸಲೀಂ ಗುರುವಾಯನಕೆರೆ, ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಾಯಿಲ್ತೋಡಿ ಈಶ್ವರ ಭಟ್, ಜಿಲ್ಲಾ ಪ್ರಚಾರ ಸಮಿತಿಯ ರಾಜ್ ಶೇಖರ್ ಶೆಟ್ಟಿ, ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!