• October 18, 2024

ಬೆಳ್ತಂಗಡಿ: ಚುನಾವಣೆಗೆ ದಿನಗಣನೆ: ಹರೀಶ್ ಪೂಂಜರಿಂದ ಮನೆ ಮನೆ ಪ್ರಚಾರ ಕಾರ್ಯಕ್ಕೆ ಚಾಲನೆ

 ಬೆಳ್ತಂಗಡಿ: ಚುನಾವಣೆಗೆ ದಿನಗಣನೆ: ಹರೀಶ್ ಪೂಂಜರಿಂದ ಮನೆ ಮನೆ ಪ್ರಚಾರ ಕಾರ್ಯಕ್ಕೆ ಚಾಲನೆ

 

ಬೆಳ್ತಂಗಡಿ: 2023 ರ ವಿಧಾನ ಸಭಾ ಚುನಾವಣೆಗೆ ದಿನಗಣನೆ ಮಾತ್ರ ಬಾಕಿ ಇದ್ದು ಅಭ್ಯರ್ಥಿಗಳ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದು ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಹಾಗೂ ಅವರ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಇಂದು ಮನೆ ಮನೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದು, ಬಜಿರೆ, ಗುಂಡೂರಿ, ಆರಂಭೋಡಿ, ಹೊಸಂಗಡಿ, ಬಡಕೋಡಿ, ಕಾಶಿಪಟ್ಣ, ಪೆರಾಡಿ, ನಾರಾವಿ, ಕುತ್ಲೂರು, ಕೊಕ್ರಾಡಿ, ಸಾವ್ಯ, ಅಂಡಿಂಜೆ ಗ್ರಾಮಗಳ ಮನೆಗಳಿಗೆ ಭೇಟಿ ನೀಡಿದರು.

ಮೊದಲ ದಿನದ ಮನೆ ಭೇಟಿಯ ವೇಳೆ ಕ್ಷೇತ್ರದ ಜನರು ಪ್ರೀತಿಯಿಂದ ಹರೀಶ್ ಪೂಂಜರನ್ನು ಸ್ವಾಗತಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಸ್ಥಳೀಯ ಜನ ಪ್ರತಿನಿಧಿಗಳು, ಮಹಾ ಶಕ್ತಿ ಕೇಂದ್ರ, ಶಕ್ತಿಕೇಂದ್ರಗಳ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!