ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸಹೋದರನ ಮನೆಗೆ ಐಟಿ ದಾಳಿ: ಮರದಲ್ಲಿ ನೇತಾಡುತ್ತಿತ್ತು ಒಂದು ಕೋಟಿ ರೂಪಾಯಿ

ಪುತ್ತೂರು: ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದಂತೆ ಐಟಿ ಅಧಿಕಾರಿಗಳು ಹಲವೆಡೆ ದಾಳಿನಡೆಸಿ ಸುಮಾರು ಮೊತ್ತವನ್ನು ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಇದೀಗ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸಹೋದರ ಸುಬ್ರಹ್ಮಣ್ಯ ರೈ ಮನೆಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಒಂದು ಕೋಟಿ ರೂ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುಬ್ರಹ್ಮಣ್ಯ ರೈ ಎಂಬವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು ಕೋಟಿ ರೂ ಹಣವನ್ನು ವಶಪಡಿಸಿಕೊಂಡಿರುವುದಾಗಿ ವರದಿ ಯಾಗಿದೆ.