• October 18, 2024

ಪುಂಜಾಲಕಟ್ಟೆ: ಚುನಾವಣಾ ಪ್ರಚಾರ ವೇಳೆ ಬಿಜೆಪಿ ಕಾರ್ಯಕರ್ತ ಹೃದಯಾಘಾತದಿಂದ ಸಾವು

 ಪುಂಜಾಲಕಟ್ಟೆ: ಚುನಾವಣಾ ಪ್ರಚಾರ ವೇಳೆ ಬಿಜೆಪಿ ಕಾರ್ಯಕರ್ತ ಹೃದಯಾಘಾತದಿಂದ ಸಾವು

 

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳ ಮುಡೂರು ಗ್ರಾಮದ ಕಲಾಯಿ ಎಂಬಲ್ಲಿ ಬಂಟ್ವಾಳ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಮನೆಮನೆಗೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಅಭ್ಯರ್ಥಿ ವೀಣ್ ನಾಯಕ್ ಎಂಬವರು ಹೃದಯಾಘಾತದಿಂದ ಸಾವನ್ಬಪ್ಪಿರುವ ಘಟನೆ ನಡೆದಿದೆ.

ಮೃತ ಪಟ್ಟ ವೀಣ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು.

ಮನೆಮನೆಗೆ ಮತಯಾಚನೆಗೆ ಹೋದಾಗ ಮಧ್ಯಾಹ್ನದ ವೇಳೆ ಎದೆನೋವೆಂದು ಕುಸಿದು ಬಿದ್ದಿದ್ದರು. ತಕ್ಷಣ ಪುಂಜಾಲಕಟ್ಟೆ ಪ್ರಾ.ಆ ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರು ಪತ್ನಿ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!