• July 27, 2024

ಬೆಳ್ತಂಗಡಿ ಕ.ಸಾ.ಪ ಘಟಕಕ್ಕೆ ಸಂಘಟನ ಕಾರ್ಯದರ್ಶಿಗಳಾಗಿ ನೇಮಕ

 ಬೆಳ್ತಂಗಡಿ ಕ.ಸಾ.ಪ ಘಟಕಕ್ಕೆ ಸಂಘಟನ ಕಾರ್ಯದರ್ಶಿಗಳಾಗಿ ನೇಮಕ

ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಂತೆ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಬ್ಬರು ಸಂಘಟನ ಕಾರ್ಯದರ್ಶಿಗಳ ನೇಮಕ ಮಾಡಿದ್ದಾರೆ.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಮಹಾ ವಿದ್ಯಾಲಯದ ಕನ್ನಡ ಉಪನ್ಯಾಸಕರು, ಸಾಹಿತ್ಯ ಸಂಘಟಕರೂ ಆಗಿರುವ ಕೆ.ವಸಂತ ಶೆಟ್ಟಿ ಮತ್ತು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರು, ಸಾಹಿತ್ಯ ಕಲಾ ಸಂಘಟಕರೂ ಆಗಿರುವ ಬೆಳ್ಳಿಯಪ್ಪ ಗೌಡ ಕೆ ಇವರು ನೇಮಕಗೊಂಡಿರುತ್ತಾರೆ ಎಂದು ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಂ.ಪಿ ಶ್ರೀನಾಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related post

Leave a Reply

Your email address will not be published. Required fields are marked *

error: Content is protected !!