• September 8, 2024

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ‘ಶಿಕ್ಷಣ ದೀವಿಗೆ

 ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ‘ಶಿಕ್ಷಣ ದೀವಿಗೆ

ಕನ್ಯಾಡಿ||: ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಆ. 16 ರಂದು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಧರ್ಮಸ್ಥಳದಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ 14 ಮಂದಿ ಬಾಲಕ ಮತ್ತು ಬಾಲಕಿಯರು ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದರಲ್ಲಿ 7 ಮಂದಿ ಮಕ್ಕಳು ಜಿಲ್ಲಾ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ.

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡವು ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದರಿಂದ ಇಂದು ವಿಜೇತರಾದ ಮಕ್ಕಳು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಗೆ ಆಗಮಿಸಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಅವರೊಂದಿಗೆ ಸಂತಸ ಹಚ್ಚಿಕೊಂಡರು ನಂತರ ಮೋಹನ್ ಕುಮಾರ್ ಮಕ್ಕಳಿಗೆ ಸ್ಮರಣಿಕೆ‌ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪೂರ್ಣಿಮಾ , ಇಂಗ್ಲಿಷ್ ಶಿಕ್ಷಕಿ ಹೇಮಲತಾ, ಯೋಗ ತರಬೇತಿದಾರೆ ಶ್ರೀಮತಿ ಪ್ರೇಮಲತಾ, ಚಿತ್ರಕಲಾ ಶಿಕ್ಷಕ ಯಲ್ಲಪ್ಪ , ಶಾಲಾ ದ್ವೀತಿಯ ಸಹಾಯಕಿ ಪ್ರೇಮ , ಶಾಲಾ ಎಸ್.ಡಿ.ಎಮ್.ಸಿ ಸದಸ್ಯ ಮಂಜುನಾಥ್ ಶೆಟ್ಟಿ ನಿಡಿಗಲ್ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!