• April 12, 2025

ಕಾಲೇಜು ವಿದ್ಯಾರ್ಥಿನಿಯ ಜೀವ ಉಳಿಸಿದ ಖಾಸಗಿ ಬಸ್:6 ಕಿಮೀ ದೂರವನ್ನು 6 ನಿಮಿಷಗಳಲ್ಲಿ ಪ್ರಯಾಣಿಸಿ ಕರಾವಳಿಯ ಪ್ರಯಾಣಿಕರ ಮೆಚ್ಚುಗೆ ಗಳಿಸಿದ ಶ್ರಮಿಕರು

 ಕಾಲೇಜು ವಿದ್ಯಾರ್ಥಿನಿಯ ಜೀವ ಉಳಿಸಿದ ಖಾಸಗಿ ಬಸ್:6 ಕಿಮೀ ದೂರವನ್ನು 6 ನಿಮಿಷಗಳಲ್ಲಿ ಪ್ರಯಾಣಿಸಿ ಕರಾವಳಿಯ ಪ್ರಯಾಣಿಕರ ಮೆಚ್ಚುಗೆ ಗಳಿಸಿದ ಶ್ರಮಿಕರು

 

ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತ್ತಿದ್ದ ಕೃಷ್ಣ ಪ್ರಸಾದ್ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಹಾರ್ಟ್ ಅಟ್ಯಾಕ್ ನ ಸೂಚನೆ ನೀಡುತ್ತಿದ್ದಂತೆ ಬಸ್ಸಿನ ಚಾಲಕ ನಿರ್ವಾಹಕರಾದ ಗಜೇಂದ್ರ ಕುಂದರ್ ಹಾಗೂ ಮಹೇಶ್ ಪೂಜಾರಿ ಸುರೇಶ್ ಯೋಚಿಸದೆ ಎಲ್ಲಾ ಪ್ರಯಾಣಿಕರನ್ನು ಹೊತ್ತುಕೊಂಡು ಆಂಬುಲೆನ್ಸ್ ಮಾದರಿಯಲ್ಲಿ ಸೈರಾನ್ ಹಾಕಿಕೊಂಡು 6 km ದೂರವನ್ನು 6ನಿಮಿಷಗಳಲ್ಲಿ ಪ್ರಯಾಣಿಸಿ ನಗರದ ಕಂಕನಾಡಿ ಆಸ್ಪತ್ರೆಯ ಹೊರಾಂಗಣವನ್ನು ಯಾರ ಅಪ್ಪಣೆಯನ್ನು ಕೇಳದೆ ಪ್ರಾಮುಖ್ಯತೆ ಯನ್ನು ಅರಿತು ಒಳ ಪ್ರವೇಶಿಸಿ ವಿದ್ಯಾರ್ಥಿ ಯನ್ನು casualty ಗೆ ಕ್ಲಪ್ತ ಸಮಯದಲ್ಲಿ ಸೇರಿಸಿ ಜೀವ ಉಳಿಸಿದ್ದಾರೆ.

ಈ ಕೆಲಸ ನೋಡುತ್ತಿದ್ದ ಸಾರ್ವಜನಿಕರನ್ನು ಮೂಕ ವಿಸ್ಮಯರನ್ನಾಗಿಸಿದೆ ಹಾಗೂ ಅವರ ಪ್ರಶಂಷೆ ಗೆ ಪಾತ್ರ ವಾಗಿದೆ

ಕರಾವಳಿಯಲ್ಲಿ ಬಸ್ಸು ಚಾಲಕ ನಿರ್ವಹಕ ಶ್ರಮಿಕ ವರ್ಗ ಮಾನವೀಯತೆ ಯ ಆಗರ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ

Related post

Leave a Reply

Your email address will not be published. Required fields are marked *

error: Content is protected !!