ಕಳೆಂಜ: ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಕಾಂಗ್ರೆಸ್ ಮುಖಂಡನ ಬಂಧನ
![ಕಳೆಂಜ: ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಕಾಂಗ್ರೆಸ್ ಮುಖಂಡನ ಬಂಧನ](https://namanachannel.in/wp-content/uploads/2024/06/IMG_20240605_222344-850x560.jpg)
ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದು ಇದೀಗ ಕಾಂಗ್ರೆಸ್ ಮುಖಂಡ ಕುಶಾಲಪ್ಪ ನನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲಿಸರು ಯಶಸ್ವಿಯಾಗಿದ್ದಾರೆ.
![](https://namanachannel.in/wp-content/uploads/2024/06/IMG_20240605_222344-1-1024x857.jpg)
ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷನಾ ಮೇಲೆ ತಲವಾರು ದಾಳಿ ನಡೆಸಿ ಮಲ್ಲೇಶ್ವರಂ ಗೆ ಪರಾರಿಯಾಗಲು ಯತ್ನಿಸಿದ ಆರೋಪಿ ಕುಶಾಲಪ್ಪ ಕಜೆನನ್ನು ಘಟನೆ ನಡೆದ 24 ಗಂಟೆಯೊಳಗಡೆ ಬಂಧಿಸುವಲ್ಲಿ ಯಶಸ್ವಿಯಾದ ಧರ್ಮಸ್ಥಳ ಪೊಲೀಸರು.
ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಜಯಭೇರಿ ಗಳಿಸಿದ್ದು ಇದರ ಸಂಭ್ರಮಾಚರಣೆಯನ್ನು ಬಿಜೆಪಿ ಕಾರ್ಯಕರ್ತರು ಆಚರಿಸಿದ್ದರು. ಇದನ್ನು ಸಹಿಸದ ಕಾಂಗ್ರೆಸ್ ಕಾರ್ಯಕರ್ತ ಕುಶಾಲಪ್ಪ ಗೌಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.