• September 8, 2024

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ ಎನ್ ಬಾಲಕೃಷ್ಣ

 ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ ಎನ್ ಬಾಲಕೃಷ್ಣ

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು,ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿ ಎನ್ ಬಾಲಕೃಷ್ಣ ಅವರು ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾದರು

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜು, ಖಜಾಂಚಿಗಳಾದ ಶ್ರೀ ಉಮಾಪತಿ , ಉಪಾಧ್ಯಕ್ಷರುಗಳಾದ ಆರ್ ಪ್ರಕಾಶ್, ಶ್ರೀ ರಾಘವೇಂದ್ರ , ಜಂಟಿ ಕಾರ್ಯದರ್ಶಿಗಳಾದ ಹನುಮಂತರಾಯಪ್ಪ , ಮೂಡ್ಯಾ ಚಂದ್ರು ಕುಕ್ಕುಟ ಮಹಾ ಮಂಡಳಿ ಅಧ್ಯಕ್ಷರು, ಹಾಗು ನಿರ್ದೇಶಕರುಗಳಾದ ಶ್ರೀ ಪುಟ್ಟಸ್ವಾಮಿ , ಡಾಕ್ಟರ್ ಆಂಜನಪ್ಪ, ಶ್ರೀ ರಘುಗೌಡ ಹಾಸನ ಅವರು ಜೊತೆಗಿದ್ದರು, ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರು ನೂತನವಾಗಿ ಆಯ್ಕೆಯಾದ ಎಲ್ಲರನ್ನೂ ಅತ್ಯಂತ ಆತ್ಮೀಯವಾಗಿ ಅಭಿನಂದಿಸಿದರು.

Related post

Leave a Reply

Your email address will not be published. Required fields are marked *

error: Content is protected !!