• July 27, 2024

ಮೊಗ್ರು: ಮಳೆಯಿಂದ ಹಾನಿಯಾದ ಮೊಗ್ರುವಿನ ಜನಾರ್ಧನ ಆಚಾರ್ಯ ಇವರ ಮನೆಗೆ ಭೇಟಿ ನೀಡಿದ ಶಾಸಕರು

 ಮೊಗ್ರು: ಮಳೆಯಿಂದ ಹಾನಿಯಾದ ಮೊಗ್ರುವಿನ ಜನಾರ್ಧನ ಆಚಾರ್ಯ ಇವರ ಮನೆಗೆ ಭೇಟಿ ನೀಡಿದ ಶಾಸಕರು

ಮೊಗ್ರು: ಜು24.ಕಳೆದ ಒಂದು ತಿಂಗಳಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾಗಶಃ ಹಾನಿಗೊಳಗಾದ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಮುರ ಜನಾರ್ಧನ ಆಚಾರ್ಯ ಇವರ ಮನೆಗೆ ಹಾನಿ ಆಗಿದ್ದು ಶಾಸಕ ಹರೀಶ್ ಪೂಂಜರವರು ಜು.24 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ವೈಯಕ್ತಿಕ ನೆರವನ್ನು ನೀಡಿ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರದಲ್ಲಿ ಒದಗಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್ ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಬಂದಾರು ಗ್ರಾ.ಪಂ ಅಧ್ಯಕ್ಷರಾದ ಪರಮೇಶ್ವರಿ ‌ಕೆ.ಗೌಡ, ಕಣಿಯೂರು ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಶಕ್ತಿ ಕೇಂದ್ರ ಪ್ರಮುಖ್ ಅಶೋಕ ಮೊಗ್ರ, ಮಂಡಲ ಯುವಮೋರ್ಚಾ ಸದಸ್ಯರಾದ ಗಿರೀಶ್ ಗೌಡ .ಬಿ.ಕೆ, ಗ್ರಾ.ಪಂ ಉಪಾಧ್ಯಕ್ಷರಾದ ಗಂಗಾಧರ ಬೂತ್ ಸಮಿತಿ ಅಧ್ಯಕ್ಷರಾದ ಶಿವ ಗೌಡ , ಗ್ರಾ.ಪಂ ಸದಸ್ಯರಾದ ಮಂಜುಶ್ರೀ, ಶಿವಪ್ರಸಾದ್, ಅನಿತಾ, ಶಾಂತಾ,
ಪದ್ಮುಂಜ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ಮಾಜಿ ಗ್ರಾ.ಪಂ ಅಧ್ಯಕ್ಷೆ ಜಾನಕಿ, ಮಹೇಶ್ ಜೆಂಕ್ಯಾರ್,ತಾಲೂಕು ಸಾಮಾಜಿಕ ಜಾಲತಾಣ ಸಂಚಾಲಕ ಸುಪ್ರೀತ್ ಜೈನ್ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!