ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಜುಲೈ 2 ರಂದು ಬಿಜೆಪಿ ವತಿಯಿಂದ ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ: ಬೆಳ್ತಂಗಡಿ ಯಲ್ಲಿ ಪಕ್ಷದ ಕಚೇರಿಯಲ್ಲಿ ಇಂದು ಸಭೆ
ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಹೆಚ್ಚಳ ಮಾಡಲು ಜುಲೈ 02, ರಂದು ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಲಿದೆ.
ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷರಾದ ವಿಜಯ ಗೌಡ ರವರ ನೇತೃತ್ವದಲ್ಲಿ.
ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಏರಿಕೆ ಯಾಗುವ ಬಗ್ಗೆ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ಜೂನ್ 29 ರಂದು ಪಕ್ಷದ ಕಚೇರಿಯಲ್ಲಿ ವಿಶೇಷ ಬೈಠಕ್ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ
ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರು ಗಣೇಶ್ ಗೌಡ ನಾವೂರು ಮಾರ್ಗದರ್ಶನ ನೀಡಿದರು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಹಾಗೂ ಬೆಳ್ತಂಗಡಿ ಮಂಡಲ ರೈತಮೋರ್ಚಾ ಅಧ್ಯಕ್ಷರಾದ ವಿಜಯ ಗೌಡ ವೇಣೂರು , ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಗೌಡ ಆಳಂಬಿಲ ಕೊಕ್ಕಡ, ದಿವಿನೇಶ್ ಚಾರ್ಮಾಡಿ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದರು.