• September 17, 2024

Tags :Bandaru

ಕಾರ್ಯಕ್ರಮ

ಬಂದಾರು ಗ್ರಾಮ ಪಂಚಾಯತ್ ನಲ್ಲಿ 77 ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬಂದಾರು: ಬಂದಾರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು 77 ನೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಪಂಚಾಯತ್ ನ ಸಮಗ್ರ ಅಭಿವೃದ್ದಿಗೆ ಸಾರ್ವಜನಿಕರ ಸಹಕಾರ ಬಯಸುತ್ತಾ ,ಸಮಸ್ತರಿಗೂ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು, ಬಂದಾರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ,ಮಾಜಿ ಅಧ್ಯಕ್ಷರಾದ ಉದಯ ಕುಮಾರ್ ಬಿ.ಕೆ ವಕೀಲರು,ಅಬ್ಬಾಸ್ ಬಟ್ಲಡ್ಕ, ನಿಕಟಪೂರ್ವ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೆರಡ್ಕ ಉಪಸ್ಥಿತರಿದ್ದರು […]Read More

ಕಾರ್ಯಕ್ರಮ ಕ್ರೀಡೆ

ಬಂದಾರು: ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

ಬಂದಾರು: ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ನಡೆದ, ಈಶ ಸಂಸ್ಥೆಯ 15 ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಂದಾರು ಗ್ರಾಮವು ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ. ದ.ಕ ಪ್ರತಿನಿಧಿಸುತ್ತಿರುವ ತಂಡವು ಸೆ.3 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.Read More

ಕಾರ್ಯಕ್ರಮ

ಬಂದಾರು: ಸ.ಹಿ.ಪ್ರಾ ಶಾಲೆ ಪೆರ್ಲ- ಬೈಪಾಡಿಯ ಶಿಕ್ಷಕಿ ದೇವಿಕಾ ಇವರಿಗೆ ಬೀಳ್ಕೊಡುಗೆ ಸಮಾರಂಭ

ಬಂದಾರು: ಆ 12. ಬಂದಾರು ಗ್ರಾಮದ ಸ.ಹಿ.ಪ್ರಾ. ಶಾಲೆ ಪೆರ್ಲ-ಬೈಪಾಡಿ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿ ಕುಮಾರಿ ದೇವಿಕಾ ಇವರ ಬೀಳ್ಕೊಡುಗೆ ಸಮಾರಂಭ ಆ.12 ರಂದು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ, ಎಸ್.ಡಿ ಎಂ.ಸಿ ಅಧ್ಯಕ್ಷರಾದ ದಾಮೋದರ ಹಾಗೂ ಎಸ್.ಡಿ ಎಂ.ಸಿ ಸದಸ್ಯರು, ಕುಪ್ಪೆಟ್ಟಿ ಕ್ಲಸ್ಟರ್ ನ ಸಿ.ಆರ್.ಪಿ ಸಂಧ್ಯಾ ಬಿ,ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವರ್ಗಾವಣೆಗೊಂಡ ಶಿಕ್ಷಕಿ ಶಾಲೆಗೆ ಮಿಕ್ಸರ್ ಗ್ರೈಂಡರ್ ಅನ್ನು ಉಡುಗೊರೆಯಾಗಿ ನೀಡಿದರು.Read More

ಆಯ್ಕೆ ಕಾರ್ಯಕ್ರಮ

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ ,

ಬಂದಾರು; ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ ಹಾಗೂ ಉಪಾಧ್ಯಕ್ಷೆಯಾಗಿ ಪುಷ್ಪಾವತಿ ಬರಮೇಲು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ವಲಯ ಅರಣ್ಯಾಧಿಕಾರಿ ಸಂಧ್ಯಾ.ಪಿ.ಡಿ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ,ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತ್ ಸದಸ್ಯರು,ಬಿಜೆಪಿ ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.Read More

ಕಾರ್ಯಕ್ರಮ

ಬಂದಾರು : ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ ಕಾರ್ಯಕ್ರಮ:ಉಚಿತ ನೇತ್ರ

ಬಂದಾರು : ಗ್ರಾಮ ಪಂಚಾಯತ್ ಬಂದಾರು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ ) ಮಂಗಳೂರು ದ.ಕ, ಪ್ರಾಥಮಿಕ ಆರೋಗ್ಯ ಕೇಂದ್ರ ಕಣಿಯೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು-ಉಡುಪಿ -ಸುಳ್ಯ. ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು, ದ.ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ರಿ.) ಕಣಿಯೂರು ವಲಯ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ (ನಿ.) ಬಂದಾರು, ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ (ರಿ.) ಬಡಗನ್ನೂರು […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಬಂದಾರು ಸ.ಉ.ಹಿ.ಪ್ರಾ.ಶಾಲೆ ಯಲ್ಲಿ ಶ್ರಮದಾನ

ಬಂದಾರು :ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿರುವ ಹೆಮ್ಮೆಯ ಸರಕಾರಿ ಉನ್ನತಿಸಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಅಡಿಕೆ ತೋಟ ನಿರ್ಮಾಣವಾಗಿದೆ. ಈ ತೋಟದಲ್ಲಿ ಕಳೆ ಕೀಳುವುದು, ಅಡಿಕೆ ಗಿಡಕ್ಕೆ ಸೊಪ್ಪು ಹಾಕುವ ಕೆಲಸವೂ ಶ್ರಮದಾನದ ಮೂಲಕ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಹಳೇವಿದ್ಯಾರ್ಥಿ ಸಂಘದ ಒಗ್ಗೂಡುವಿಕೆಯಲ್ಲಿ ಜುಲೈ.13 ರಂದು ನೆರವೇರಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಗೌಡ ಪೋಯ್ಯೋಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ ಗೌಡ […]Read More

ಕಾರ್ಯಕ್ರಮ ಜಿಲ್ಲೆ ರಾಜಕೀಯ ಸ್ಥಳೀಯ

ಪದ್ಮುಂಜ: ಮೊಗ್ರು, ಕಣಿಯೂರು, ಬಂದಾರು, ಇಳಂತಿಲ, ಉರುವಾಲು ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

ಪದ್ಮುಂಜ: ಪದ್ಮುಂಜ ಸಹಕಾರಿ ಭವನದಲ್ಲಿ ಜೂ.29 ರಂದು ಬಂದಾರು, ಮೊಗ್ರು, ಕಣಿಯೂರು, ಉರುವಾಲು, ಇಳಂತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆಯು ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಂದಾರು ಪಂ.ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ, ಕಣಿಯೂರು ಅಧ್ಯಕ್ಷೆ ಗಾಯತ್ರಿ, ಇಳಂತಿಲ ಅಧ್ಯಕ್ಷೆ ಚಂದ್ರಿಕಾ ಭಟ್, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪ್ರಮುಖರು, ಕೋಶಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.Read More

ಕಾರ್ಯಕ್ರಮ

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್,ಯೋಗ ದಿನದ ಮಹತ್ವದ ಬಗ್ಗೆ ತಿಳಿಸಿ,ಮಕ್ಕಳಿಗೆ ಕೆಲವು ಸರಳ ಆಸನಗಳನ್ನು ಮಾಡಿಸಿದರು. ಶಾಲಾ ಪದವೀಧರ ಶಿಕ್ಷಕಿ ಶ್ರೀಮತಿ ಗಾಯತ್ರಿ,ಕೆ ಮತ್ತು ಗೌರವ ಶಿಕ್ಷಕರಾದ ಶ್ರೀಮತಿ ವನಿತಾ,ಕು.ಅಕ್ಷತಾ ಸಹಕರಿಸಿದರು.Read More

ಕಾರ್ಯಕ್ರಮ

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆ‌-ಬಂದಾರು ಮಂತ್ರಿಮಂಡಲ ರಚನೆ

ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ 2023-24 ನೇ ಸಾಲಿನ ಶಾಲಾ ಮಂತ್ರಿಮಂಡಲವನ್ನು ಚುನಾವಣಾ ಪ್ರಕ್ರಿಯೆಯ ಮೂಲಕ ರಚಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಕು.ಶ್ರಾವ್ಯ (7ನೇ) ಮತ್ತು ಶಾಲಾ ಉಪಮುಖ್ಯಮಂತ್ರಿಯಾಗಿ ಕು.ಸುಭಿಕ್ಷಾ(7ನೇ) ಆಯ್ಕೆಯಾದರು. ಉಳಿದಂತೆ ವಿದ್ಯಾಮಂತ್ರಿಯಾಗಿ ಪೂರ್ವಿತ್(7ನೇ),ಕೃಷಿ ಮಂತ್ರಿಯಾಗಿ ಪ್ರಣತ್(7ನೇ),ಕ್ರೀಡಾ ಮಂತ್ರಿಯಾಗಿ ಸೃಜನ್(7ನೇ),ಸಾಂಸ್ಕೃತಿಕ ಮಂತ್ರಿಯಾಗಿ ರಕ್ಷಿತಾ(6ನೇ),ಆರೋಗ್ಯ ಮಂತ್ರಿಯಾಗಿ ಗಣೇಶ (7ನೇ),ವಾರ್ತಾ ಮಂತ್ರಿಯಾಗಿ ಚರಣ್(6ನೇ),ನೀರಾವರಿ ಮಂತ್ರಿಯಾಗಿ ಚಕ್ರೇಶ್ (6ನೇ) ಹಾಗೂ ಸ್ಪೀಕರ್ ಆಗಿ ನಿಶ್ಮಿತಾ (7ನೇ) ಆಯ್ಕೆಯಾದರು. ಶಾಲಾ ಶಿಕ್ಷಕವೃಂದದವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.Read More

ಜಿಲ್ಲೆ ಸ್ಥಳೀಯ

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

ಬಂದಾರು: ಗ್ರಾಮ ಪಂಚಾಯತ್ ಬಂದಾರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಬಂದಾರು ಗ್ರಾಮದ ಮೈರೊಳ್ತಡ್ಕವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ ಮೇ 11 ರಂದು ನೆರವೇರಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಕೆ ಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಗೌಡ ಖಂಡಿಗ, ಸುಂದರ ಗೌಡ ನಿನ್ನಿಕಲ್ಲು,ಗುರುಪ್ರಸಾದ್ ಗೌಡ ,ನೀಲಯ್ಯ ಗೌಡ, ಕೇಶವ ಗೌಡ ಪುಯಿಲ, ಜನಾರ್ದನ ಗೌಡ ಪುಯಿಲ, ನೊಣಯ್ಯ ಗೌಡ,ಡೊoಬಯ್ಯ […]Read More

error: Content is protected !!