• July 27, 2024

Tags :Heggade

ಜಿಲ್ಲೆ ಸ್ಥಳೀಯ

ನಲಿಕೆಯವರ ಸಮಾಜ ಸೇವಾ ಸಂಘದಿಂದ ಧರ್ಮಸ್ಥಳ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: ನಲಿಕೆಯವರ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ರಾಜ್ಯ ಸಭೆಯ ಸಂಸದರೂ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಗಳಾಗಿರುವ ಡಾ ಡಿ. ವೀರೇಂದ್ರ ಹೆಗ್ಗಡೆಯವರನ್ನು ಜ.29 ರಂದು ಭೇಟಿ ಮಾಡಲಾಯಿತು. ಈ‌ ಸಂದರ್ಭದಲ್ಲಿ ಸಂಘದ ಮೂಲಭೂತ ಸೌಕರ್ಯಗಳಿಗಾಗಿ ಅವರಿಗೆ ಮನವಿಯನ್ನೂ ಸಲ್ಲಿಸಲಾಯಿತು. ಮನವಿಗೆ ಅವರು ಉತ್ತಮ ಸ್ಪಂದನೆ ನೀಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷ ಎಸ್.ಪ್ರಭಾಕರ , ಉಪಾಧ್ಯಕ್ಷ ರಾಮು ಶಿಶಿಲ , ಕಾರ್ಯದರ್ಶಿ ತಿಮ್ಮಪ್ಪ, ಸದಸ್ಯರುಗಳಾದ ವಿಜಯ್ , ವಿನಯ್, ಓಬಯ್ಯ, ಸ್ಥಾಪಕ ಅಧ್ಯಕ್ಷ […]Read More

ಕಾರ್ಯಕ್ರಮ ಜಿಲ್ಲೆ ರಾಜ್ಯ ಸ್ಥಳೀಯ

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಸುತ್ತಮುತ್ತ ಖಾಸಗಿ ಹೋಟೆಲ್‌ಗಳಿಗೆ ಅವಕಾಶ ನೀಡಬೇಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಬಳಿಕ ಮಾತನಾಡಿದ ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ ದೇವಸ್ಥಾನದ ಒಂದೂವರೆ, ಎರಡು ಕಿಲೋ ಮೀಟರ್‌ ಸುತ್ತಮುತ್ತ ಖಾಸಗಿ ಹೊಟೇಲ್‌ಗಳಿಗೆ ಅವಕಾಶ ನೀಡಬೇಡಿ. ಮಾಂಸಹಾರ ಹೊಟೇಲ್‌ಗಳು ಬಂದರೆ ಬಾರ್‌ಗಳೂ ಬರುತ್ತವೆ. ನೇತ್ರಾವತಿ ನದಿ ಸೇರಿದಂತೆ, ಇತರ ನದಿಗಳ ಸುತ್ತ ಹೊಟೇಲ್‌ಗಳಿಗೆ ಅವಕಾಶ ನೀಡುವುದು ಬೇಡ. ಕ್ಷೇತ್ರದ […]Read More

ಜಿಲ್ಲೆ ದೇಶ ರಾಜ್ಯ ಸ್ಥಳೀಯ

ಉಪರಾಷ್ಟ್ರಪತಿಯವರನ್ನು ಭೇಟಿಯಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾಸದಸ್ಯರಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರು ಡಿ.9 ರಂದು ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗ್ ದೀಪ್ ಧನ್ ಕರ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ವೇಳೆ ಧರ್ಮಸ್ಥಳದ ಪರವಾಗಿ ಉಪರಾಷ್ಟ್ರಪತಿಗೆ ಹೆಗ್ಗಡೆಯವರು ಗೌರವಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.Read More

ಜಿಲ್ಲೆ ಸಿನಿಮಾ ಸ್ಥಳೀಯ

ಕಾಂತಾರ ಸಿನೆಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಡಾ|ಡಿ ವೀರೇಂದ್ರ ಹೆಗ್ಗಡೆ

ಮಂಗಳೂರು: ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಭಾರೀ‌ ಸದ್ದು‌ ಮಾಡಿದ್ದು ಈ ಸಿನಿಮಾವನ್ನು‌ ನೋಡದ ಜನ ಇಲ್ಲ ಅನ್ನುವಂತಾಗಿದೆ. ಸಿನಿಮಾ ಅಷ್ಟರ ಮಟ್ಟಿಗೆ ಜನರನ್ನು ಸೆಳೆಯುತ್ತಿದೆ. ಅ.21 ರಂದು ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಸಿನಿಮಾ‌ ವೀಕ್ಷಣೆ ಬಳಿಕ ಚಿತ್ರವನ್ನು ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ ಸಲ್ಲಿಸಿದ್ದಾರೆ. ತುಳುನಾಡಿ ದೈವಾರಾಧನೆಯನ್ನು ಇಡೀ‌ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ ಶೆಟ್ಟಿ […]Read More

ಕಾರ್ಯಕ್ರಮ ಸ್ಥಳೀಯ

ಸನಾತನ ಪಂಚಾಂಗ – 2023′ ರ (ಕ್ಯಾಲೆಂಡರ್) ಲೋಕಾರ್ಪಣೆಗೊಳಿಸಿದ ಡಾ||ಡಿ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆ .30 ರಂದು ‘ಸನಾತನ ಪಂಚಾಂಗ – 2023 ರ ಲೋಕಾರ್ಪಣೆಯನ್ನು ಮಾಡಿ ಪಂಚಾಂಗದ ರಚನೆಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದರುು. ಈ ಸಂದರ್ಭದಲ್ಲಿ ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಉದ್ಯಮಿಗಳು ಹಾಗೂ ಹಿಂದೂ ಜಾಗರಣ ವೇದಿಕೆಯ ಪದ್ಮನಾಭ ಶೆಟ್ಟಿಗಾರ್, ವಕೀಲರಾದ ಉದಯಕುಮಾರ್ ಬಂದಾರು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು […]Read More

ಧಾರ್ಮಿಕ ಸ್ಥಳೀಯ

ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಡಾ||ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ಧರ್ಮಸ್ಥಳ : ರಾಜ್ಯ ಸಭೆಗೆ ನಾಮ ನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರಿಗೆ ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಆ. 14 ರಂದು ಅಭಿನಂದನೆಯನ್ನು ತಿಳಿಸಲಾಯಿತು ಹಾಗೂ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಆಚರಿಸಲಾಗುವ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವ ದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮ ಭಜನಾ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.Read More

ಕಾರ್ಯಕ್ರಮ ಸ್ಥಳೀಯ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸಾಧಕರ ದಿನಾಚರಣೆ

ಉಜಿರೆ: ಉಜಿರೆ ಶ್ರೀ ಧ. ಮ. ಕಾಲೇಜು (ಸ್ವಾಯತ್ತ )ವತಿಯಿಂದ ಆ.10 ರಂದು ಉಜಿರೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಮಾತೃ ಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಶ್ರೀ ಧ. ಮ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್,ಡಾ. ಸತೀಶ್ಚಂದ್ರ, ಕಾಮನ್ ವೇಲ್ತ್ ಕ್ರೀಕೂಟದಲ್ಲಿ ಪದಕ ವಿಜೇತ ಕಾಲೇಜು ಹಳೆ ವಿದ್ಯಾರ್ಥಿ ಗುರುರಾಜ್ಭಾಗವಹಿಸಿದ್ದರು. ಕಾಲೇಜು […]Read More

ದೇಶ ಶುಭಾಶಯ ಸ್ಥಳೀಯ

ದೆಹಲಿ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ| ಡಿ ವೀರೇಂದ್ರ ಹೆಗ್ಗಡೆ

ದೆಹಲಿ: ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಡೆಯವರು ಜುಲೈ 21ರಂದು ದೆಹಲಿಯ ಸಂಸತ್ ಭವನದಲ್ಲಿ ದೇವರ ಹೆಸರಿನಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮ್ಮ 20ನೇ ವಯಸ್ಸಿನಲ್ಲಿ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ಹೆಗ್ಗಡೆಯವರು ಶಿಕ್ಷಣ ಕ್ಷೇತ್ರ, ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗಕ್ಕಾಗಿ ಇವರು ಯುವಕರನ್ನು ಪ್ರೇರೇಪಿಸಿದ ಬಗೆ ಅಮೋಘ. ಡಾ. ಡಿ ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ ಅಥೇಟ್ ಉಷಾ ಹಾಗೂ ಚಲನಚಿತ್ರ ಕಥೆಗಾರ ವಿ […]Read More

ದೇಶ

ದೆಹಲಿಗೆ ತಲುಪಿದ ಡಾ| ಡಿ ವೀರೇಂದ್ರ ಹೆಗ್ಗಡೆಯವರಿಗೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸ್ವಾಗತ

ದೆಹಲಿ: ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ ವೀರೇಂದ್ರ ಹೆಗ್ಗಡೆಯವರು ನಾಳೆ ಪ್ರಮಾಣ ವಚನ ಸ್ವೀಕರಿಸಲು ಇಂದು ದೆಹಲಿಗೆ ತೆರಳಿದ್ದು, ದೆಹಲಿಗೆ ರಾತ್ರಿ 9 ಗಂಟೆಗೆ ತಲುಪುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್,ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರ್, ಶ್ರೀನಿವಾಸ ರಾವ್ ಧರ್ಮಸ್ಥಳ ಅವರು ಜೊತೆಗಿದ್ದರು. ಹೆಗ್ಗಡೆಯವರು ನಾಳೆ […]Read More

ಜಿಲ್ಲೆ ಶುಭಾಶಯ ಸ್ಥಳೀಯ

ಧರ್ಮಸ್ಥಳ: ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಬಿಜೆಪಿ ದ.ಕ ಜಿಲ್ಲೆಯ ವತಿಯಿಂದ ಅಭಿನಂದನೆ

ಧರ್ಮಸ್ಥಳ: ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜು.11 ರಂದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರಾದ ಶ್ರೀ ಸಂಜೀವ ಮಠಂದೂರು, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಭರತ್ ಶೆಟ್ಟಿ, ಶ್ರೀ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ […]Read More

error: Content is protected !!