ಉರುವಾಲು: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಮ್ಟಂಗೆ ಎಂಬಲ್ಲಿ ವೃದ್ಧೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.1ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆ ಅಮ್ಟಂಗೆ ನಿವಾಸಿ ಜಾನಕಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಜಾನಕಿ ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ. ಮೃತರು ಎರಡು ಹೆಣ್ಣು ಮಕ್ಕಳನ್ನು ಹಾಗೂ ಒಂದು ಗಂಡು ಮಗನನ್ನು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.Read More
Tags :Kere
ಕನ್ಯಾಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಸುಂದರ ಮೃತ ದುರ್ದೈವಿ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಇವರ ಮೃತದೇಹ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಮತ್ತಿಲ ಎಂಬಲ್ಲಿನ ನಿವಾಸಿ ಅಚ್ಚುತರಾವ್ ಎಂಬವರ ಅಡಿಕೆ ತೋಟದಲ್ಲಿನ ತೆರೆದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಿದು ಬರುತ್ತಿದ್ದ […]Read More