ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ಗರ್ಡಾಡಿ- ಬಳೆಂಜ ರಸ್ತೆಗೆ ರೂ. 2 ಕೋಟಿ ಅನುದಾನ ಬಿಡುಗಡೆಗೊಂಡಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಆದರೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ.Read More
Tags :Poonja
ಕಸ್ತೂರಿರಂಗನ್ ವರದಿಯ ಕುರಿತಾಗಿ ವಿಧಾನಸೌಧದಲ್ಲಿ ಸಮಾಲೋಚನಾ ಸಭೆ: ಈ ವರದಿ ತಾಲೂಕಿನಲ್ಲಿ ತೊಂದರೆಯುಂಟಾಗುವುದರಿಂದ
ವಿಧಾನಸೌಧದಲ್ಲಿ ಇಂದು ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಸ್ತೂರಿರಂಗನ್ ವರದಿಯ ಕುರಿತಾಗಿ ನಡೆದ ಸಮಾಲೋಚನಾ ಸಭೆಯಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿ,ಈ ವರದಿಯ ಅನುಷ್ಟಾನದಿಂದಾಗಿ ನಮ್ಮ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.Read More
ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೋಚ್ಚ ಜಿಲ್ಲಾ ಪಂಚಾಯತ್ ಇಂಜಿನಿಯರ್ ಹರ್ಷಿತ್ , ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರುRead More
ಬೆಳ್ತಂಗಡಿ : ಮಂಗಳೂರು ವಿಶ್ವ ವಿದ್ಯಾಲಯ ಹಾಗೂ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಇಂಟರ್ ಕಾಲೇಜು ವಾಲಿಬಾಲ್ ಪಂದ್ಯಾಟ ನ.23 ರಂದು ನಡೆಯಿತು. ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರು ಸುಬ್ರಹ್ಮಣ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಿ. ಆರ್. ಕಿಶೋರ್ ಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ , ಶೈಲೇಶ್ ಕುಮಾರ್, ಪುಂಜಾಲಕಟ್ಟೆ ಕಾಲೇಜು ಪ್ರಾಂಶುಪಾಲರು ಶರತ್ ಕುಮಾರ್ , ಬೆಳ್ತಂಗಡಿ ಜೆಸಿಐ ನಿಯೋಜಿತ ಅಧ್ಯಕ್ಷ ಶಂಕರ […]Read More
ತಣ್ಣೀರುಪಂಥ: ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬವರ ಮನೆಗೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು. ಘಟನೆ ನಡೆದ ದಿನವೇ ರಾತ್ರಿ ಶಾಸಕರು ದೂರವಾಣಿ ಮೂಲಕ ಅಧಿಕಾರಿಗಳ ಸಂಪರ್ಕಿಸಿ ಕಂದಾಯ ಇಲಾಖೆಯಲ್ಲಿ ಸಂಪರ್ಕಿಸಿ ಸೂಕ್ತ ರೀತಿಯಲ್ಲಿ ಪರಿಹಾರ ನೀಡುವ ಭರವಸೆ ನೀಡಿ,ತಮ್ಮಿಂದಾಗುವ ಸಹಾಯಹಸ್ತ ನೀಡಿ ಮನೆಯವರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಿದ್ದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ ಕೋಟ್ಯಾನ್,ಕಣಿಯೂರು ಮಹಾಶಕ್ತಿ […]Read More
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಕಾರಿಗೆ ಯಾರೊ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ತೋರಿಸಿ ಜೀವ ಬೆದರಿಕೆ ಒಡ್ಡಿದ ಘಟನೆ ಮಂಗಳೂರು ನಗರ ಹೊರ ವಲಯದ ಪರಂಗಿಪೇಟೆ ಎಂಬಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದು ದೂರು ದಾರರು ಆರೋಪಿ ಮತ್ತು ವಾಹನವನ್ನು ಗುರುತಿಸಿದ್ದು ಈ ಹಿನ್ನೆಲೆ ಆರೊಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓವರ್ ಟೇಕ್ […]Read More
ಶಾಸಕ ಹರೀಶ್ ಪೂಂಜರ ಮೇಲೆ ಕಿಡಿಗೇಡಿಗಳ ತಂಡದಿಂದ ದಾಳಿಗೆ ಯತ್ನ:ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ
ಬೆಳ್ತಂಗಡಿ: ದುಷ್ಕರ್ಮಿಗಳ ತಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿರುವ ಘಟನೆಯನ್ನು ವಿರೋಧಿಸಿ, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿ.ಹಿ.ಪ ಭಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಅ. 14ರಂದು ಬೆಳ್ತಂಗಡಿ ವೃತ್ತನಿರೀಕ್ಷರಿಗೆ ಮನವಿ ಸಲ್ಲಿಸಲಾಯಿತು. ಶಾಸಕರ ಮೇಲೆ ದಾಳಿಗೆ ಯತ್ನಿಸಿದ ಕಿಡಿಗೇಡಿಗಳ ತಂಡವನ್ನು ಶೀಘ್ರ ವಾಗಿ ಬಂಧಿಸಬೇಕು, ಶಾಸಕರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂದು ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಿ.ಹಿ.ಪ ಜಿಲ್ಲಾ ಸಂಚಾಲಕ ಭಾಸ್ಕರ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ನವೀನ್ […]Read More
ಬೆಳ್ತಂಗಡಿ: ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ತಲವಾರು ತೋರಿಸಿ ಜೀವಬೆದರಿಕೆ ಒಡ್ಡಿದ್ದ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿ ಪೇಟೆ-ಪಡೀಲ್ ಎಂಬಲ್ಲಿ ಅ.13ರಂದು ತಡ ರಾತ್ರಿ ನಡೆದಿದೆ. ಈ ಬಗ್ಗೆ ಹರೀಶ್ ಪೂಂಜರವರ ಕಾರು ಚಾಲಕ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.13ರಂದು ಸಂಜೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಹರೀಶ್ ಪೂಂಜರವರು ಬೆಳ್ತಂಗಡಿಗೆ ಕಾರಿನಲ್ಲಿ ಬರುವ ವೇಳೆ […]Read More
ಮಚ್ಚಿನ : ಸರಕಾರಿ ಉನ್ನತೀಕರಿಸಿದ ಪ್ರಾ. ಶಾಲೆ ಮಚ್ಚಿನ ಇಲ್ಲಿಯ 16.5 ಲಕ್ಷ ವೆಚ್ಚದ ನೂತನ ಕಟ್ಟಡ ಕಾಮಗಾರಿ ಶಿಲಾನ್ಯಾಸವನ್ನು ಸೆ.7 ರಂದು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಉಪಾಧ್ಯಕ್ಷರಾದ ಡೀಕಮ್ಮ, ಗ್ರಾ.ಪಂ ಸದಸ್ಯರಾದ ಚೇತನ್ , ಪ್ರಮೋದ್ ಕುಮಾರ್ , ಚಂದ್ರಶೇಖರ ಬಿ.ಎಸ್, ಜಯಶ್ರೀ , ರುಕ್ಮಣಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪರಮೇಶ್ವರ್, ಪದ್ಮನಾಭ ಸಾಲ್ಯಾನ್, ಚೆನ್ನಪ್ಪ ಪ್ರಭಾಕರ ಪ್ರಭು, ಸುಮ ಹಾಗೂ […]Read More
ಬೆಳ್ತಂಗಡಿ: ” ಅಗ್ನಿ ವೀರ್” ಆಯ್ಕೆ ಶಿಬಿರವು ಹಾವೇರಿಯಲ್ಲಿ ಸಪ್ಟೆಂಬರ್ 1ರಂದು ಜರುಗಲಿದ್ದು ಈ ನಿಟ್ಟಿನಲ್ಲಿ ಆಸಕ್ತ ಅಭ್ಯರ್ಥಿಗಳಿಗೆ ಸುಮಾರು ಒಂದು ತಿಂಗಳಿನಿಂದ ಮಾಜಿ ಸೈನಿಕರಾದ ಉಮೇಶ್ ಬಂಗೇರ ಅವರ ನೇತೃತ್ವದಲ್ಲಿ ತರಬೇತಿ ನೀಡಲಾಗಿತ್ತು, ಇಂದು ಮತ್ತು ನಾಳೆ ಬೆಳ್ತಂಗಡಿಯ ಸುಮಾರು 50 ಮಂದಿ ಅಭ್ಯರ್ಥಿಗಳು ಹಾವೇರಿಗೆ ತೆರಳುತ್ತಿದ್ದು , ಅಭ್ಯರ್ಥಿಗಳು ಇಂದು ಶ್ರಮಿಕ ಕಚೇರಿಗೆ ಆಗಮಿಸಿದರು. ಈ ಸಂಧರ್ಭದಲ್ಲಿ ಶಾಸಕ ಹರೀಶ್ ಪೂಂಜ ಇವರು ಬೆಳ್ತಂಗಡಿಯ ಅಭ್ಯರ್ಥಿಗಳಿಗೆ ಶುಭಕೋರಿ ಬೀಳ್ಕೊಟ್ಟರು.Read More