ಬೇಸಿಗೆಯ ಬಿಸಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ, ಪಕ್ಷಿಗಳ ಸಂಕುಲಕ್ಕೂ ಜೀವನ ಮಾಡೋದೇ ಕಷ್ಟ ಆದಂತಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಪೊಲೀಸರು ಹೊಸ ಯೋಜನೆಯನ್ನು ಮಾಡಿದ್ದಾರೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ಈ ಯೋಜನೆ ಮಾಡಲಾಗಿದೆ. ಪೊಲೀಸ್ ಶ್ವಾನಗಳಿಗೆ ಶೂ ಭಾಗ್ಯ ದೊರೆತಿದೆ. ಕಲಬುರಗಿ ಜಿಲ್ಲಾ ಪೊಲೀಸ್ ಶ್ವಾನಗಳಿಗೆ ಶೂ ಹಾಕಲಾಗಿದೆ. ಈ ಮೂಲಕ ರಾಜ್ಯದಲ್ಲೇ ಮೊದಲ ಬಾರಿಗೆ ಶ್ವಾನಗಳಿಗೆ ಶೂ ಹಾಕಿದಂತಾಗಿದೆ. ಅಲ್ಲದೇ ಶ್ವಾನಗಳಿಗೆ ಬಿಸಿಲ ಬೇಗೆ ತಡೆಯಲು ಏರ್ಕೂಲರ್ ವ್ಯವಸ್ಥೆ ಮಾಡಲಾಗಿದೆ. […]Read More
Tags :Rajya
ಮಾಚಾರು: ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ನ.21 ರಂದು ನಡೆದ 14 ವರ್ಷದ ವಯೋಮಿತಿಯ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವು ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ತಂಡದಲ್ಲಿ ಉಜಿರೆ ಮಾಚಾರು ನಿವಾಸಿ ಕು.ದೀಪಿಕಾ ವಿ.ಬಿ ಇವರು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಇವರು ಉಜಿರೆಯ ಮಾಚಾರಿನ ಭಾರತಿ ವಿನಯಚಂದ್ರ ನಾಯ್ಕ ಇವರ ಪುತ್ರಿ. ಜನವರಿ ತಿಂಗಳಿನಲ್ಲಿ ಜಾರ್ಖಾಂಡ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕ ರಾಜ್ಯದ ತಂಡಕ್ಕೆ ಪ್ರತಿನಿಧಿಸಲಿದ್ದಾರೆ.Read More
ಉಚಿತ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಜನತೆಗೆ ಒದಗಿಸುವ ಭರವಸೆ ನೀಡುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗೆ ಅದರ ಈಡೇರಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದರೆ ಮುಖ್ಯಮಂತ್ರಿಗೆ ಕಳುಹಿಸಿ ಎಂದು ಅವರು ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಯಾವೆಲ್ಲ ಬಣ್ಣ ಬದಲಾಯಿಸ್ತಾರೋ ನೋಡಬೇಕು. […]Read More
ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ ಇದೀಗ ಪ್ರಕಟಗೊಂಡಿದ್ದು, ಈ ಬಾರಿ ಶೇ.83.89 ಫಲಿತಾಂಶ ಬಂದಿದೆ. ಈ ಬಾರಿ 4 ವಿದ್ಯಾರ್ಥಿಗಳಿಗೆ 625 ಅಂಕ ಲಭಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. 11 ಗಂಟೆ ನಂತರ karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ.Read More
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ NPS ಸಂಘ(ರಿ) ಬೆಂಗಳೂರು ಇದರ ವತಿಯಿಂದ ಪ್ರಾರಂಭಗೊಂಡಿರುವ OPS ಸಂಕಲ್ಪ ಯಾತ್ರೆ ಅ.17 ರಂದು ಬೆಳ್ತಂಗಡಿಗೆ ಆಗಮಿಸಿತ್ತು. ಇದರ ಭಾಗವಾಗಿ ತಾಲೂಕಿನ ಎಲ್ಲಾ ಸರಕಾರಿ ನೌಕರರು ರಾಜ್ಯ ಸಂಘದ ಈ ಸಂಕಲ್ಪ ಯಾತ್ರೆ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸ್ವಾಗತಿಸಿ ಬೆಳ್ತಂಗಡಿ ಗೆ ಕರೆ ತರಲಾಯಿತು.ನಂತರ ಬೆಳ್ತಂಗಡಿ ಬಸ್ ನಿಲ್ದಾಣದಿಂದ ಮೂರು ಮಾರ್ಗವಾಗಿ ಕಾಲ್ನಡಿಗೆ ಜಾಥಾದಲ್ಲಿ ತಾಲೂಕಿನ ತಹಸೀಲ್ದಾರ್ ರಿಗೆ ಮನವಿ ಸಲ್ಲಿಸಲಾಯಿತು. ತದನಂತರ ಯಾತ್ರೆ ಗುರುವಾಯನಕೆರೆ ಮೂಲಕ ಉಪ್ಪಿನಂಗಡಿಯಾಗಿ ಪುತ್ತೂರು […]Read More