• January 22, 2025

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ.

 ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ.

 

76ನೇ ಸ್ವಾತಂತ್ರ್ಯೋತ್ಸವವನ್ನು ವಾಣಿ ಶಿಕ್ಷಣ ಸಂಸ್ಥೆಗಳು ಗೌರವ ಸಂಭ್ರಮದಿಂದ ಆಚರಿಸಿತು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀ ಪಿ ಕುಶಾಲಪ್ಪ ಗೌಡ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯ ದಿನದ ಸಂದೇಶ ನೀಡಿದರು .


ನಾವೆಲ್ಲರೂ ಅನುಭವಿಸುತ್ತಿರುವ ಸ್ವಾತಂತ್ರ್ಯ ಹಲವಾರು ವೀರಪುರುಷರು ಮತ್ತು ವೀರ ವನಿತೆಯರ ತ್ಯಾಗ ಬಲಿದಾನದ ಕೊಡುಗೆ ಎಂದು ಸ್ವಾತಂತ್ರ್ಯ ಸೇನಾಧಿಗಳನ್ನು ಸ್ಮರಿಸಿದರು . ಮುಂದಿನ ತಲೆಮಾರು ರಾಷ್ಟ್ರಭಕ್ತಿಯ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸದಾ ತೊಡಗಿಸಿಕೊಂಡು ಈ ರಾಷ್ಟ್ರವನ್ನು ಕಟ್ಟಿದ ಮಹಾ ಚೇತನಗಳನ್ನು ಸದಾ ಸ್ಮರಿಸುವ ಕೆಲಸ ಮಾಡಬೇಕೆಂದು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು . ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಶ್ರೀ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ, ಶಿಕ್ಷಣ ಸಂಸ್ಥೆಗಳ ಸದಸ್ಯರಾದ ಶ್ರೀಮತಿ ಉಷಾ ವೆಂಕಟರಮಣ ಗೌಡ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಿ ಯದುಪತಿ ಗೌಡ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷ್ಮಿನಾರಾಯಣ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಸುಹಾಸಿನಿ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ನಾರಾಯಣಗೌಡ, ಉಪಾಧ್ಯಕ್ಷೇ ಶ್ರೀಮತಿ ಉಷಾ ಹಾಗೂ ಹಲವಾರು ಪೋಷಕರು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರದ ವಿಷ್ಣು ಪ್ರಕಾಶ್ ಎಂ ಕಾರ್ಯಕ್ರಮವನ್ನು ನಿರ್ವಹಿಸಿದರು.

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳು ಹಾಗೂ ಪ್ರೌಢಶಾಲೆಗಳಿಗೆ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು
ವಾಣಿ ಶಿಕ್ಷಣ ಸಂಸ್ಥೆಯ ಎರಡು ಸಾವಿರದಷ್ಟು ವಿದ್ಯಾರ್ಥಿಗಳು ವಿವಿಧ ಬಣ್ಣದ ಸಮವಸ್ತ್ರಗಳಿಂದ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಗಳಾದರು. ಶಾಲೆಯ ಬ್ಯಾಂಡ್ ಸೆಟ್ ತಂಡ ಆಕರ್ಷಕ ರೀತಿಯಲ್ಲಿ ಅತಿಥಿಗಳನ್ನ ವೇದಿಕೆಗೆ ಬರಮಾಡಿಕೊಂಡಿತು.

Related post

Leave a Reply

Your email address will not be published. Required fields are marked *

error: Content is protected !!